1 Kings 15:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಾಷನು ಹೊಸರಾಜನಾದ ಸಮಯದಲ್ಲಿ ಅವನು ಯಾರೊಬ್ಬಾಮನ ವಂಶದಲ್ಲಿ ಎಲ್ಲರನ್ನೂ ಕೊಂದುಹಾಕಿದನು. ಯಾರೊಬ್ಬಾಮನ ವಂಶದಲ್ಲಿ ಯಾರೂ ಜೀವಸಹಿತ ಉಳಿಯಲು ಬಾಷನು ಬಿಡಲಿಲ್ಲ. ಯೆಹೋವನು ಹೇಳಿದ್ದಂತೆಯೇ ಇದು ಸಂಭವಿಸಿತು. ಯೆಹೋವನು ತನ್ನ ಸೇವಕನಾದ ಶೀಲೋವಿನ ಅಹೀಯನ ಮೂಲಕ ಇದನ್ನು ಹೇಳಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.
Kannada BSI Bible 2016
ಅವನು ಆಳುತ್ತಿರುವಾಗ ಏನಾಯಿತಂದರೆ, ಯಾರೊಬ್ಬಾಮನ ಮನೆಯನ್ನೆಲ್ಲಾ ಹೊಡೆದುಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯವರಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.
Kannada Bible (KNCL) BSI 2016
ಅರಸನಾದ ಕೂಡಲೆ, ಯಾರೊಬ್ಬಾಮನ ಮನೆಯವರಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಸರ್ವೇಶ್ವರ ಶಿಲೋವಿನ ಪ್ರವಾದಿ ಅಹೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಆಳುತ್ತಿರುವಾಗ, ಯಾರೊಬ್ಬಾಮನ ಮನೆಯವರನ್ನೆಲ್ಲಾ ಸಂಹರಿಸಿಬಿಟ್ಟನು. ಯಾರೊಬ್ಬಾಮನು ಪಾಪಮಾಡಿ, ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನಿಮಿತ್ತವಾಗಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ, ಯೆಹೋವ ದೇವರು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ನೆರವೇರಿತು.