2 Chronicles 19:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಬಳಿಗೆ ಕೊಲೆಯ ಪ್ರಕರಣಗಳ ಬಗ್ಗೆ, ಕಟ್ಟಳೆಯ ಬಗ್ಗೆ, ಆಜ್ಞೆಯ ಬಗ್ಗೆ, ನಿಯಮದ ಬಗ್ಗೆ ಮತ್ತು ಬೇರೆ ಯಾವುದಾದರೂ ಕಟ್ಟಳೆಯ ಬಗ್ಗೆ ಬಗೆಹರಿಸಲು ಬರಬಹುದು. ಅವೆಲ್ಲಾ ನಿಮ್ಮ ಸಹೋದರರಿಂದಲೇ ಬರುವವು. ದೇವರಿಗೆ ವಿರುದ್ಧವಾಗಿ ಪಾಪಮಾಡಬಾರದೆಂಬುದಾಗಿ ಅವರಿಗೆಲ್ಲಾ ಎಚ್ಚರಿಸಬೇಕು. ನೀವು ನಂಬಿಗಸ್ತಿಕೆಯಿಂದ ಸೇವೆಮಾಡದಿದ್ದಲ್ಲಿ ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ದೇವರ ಕೋಪ ಉರಿಯುವಂತೆ ಮಾಡಿಕೊಳ್ಳುವಿರಿ. ನೀವು ತಪ್ಪಿತಸ್ಥರಾಗದೆ ನಂಬಿಗಸ್ತಿಕೆಯಿಂದ ಸೇವೆಮಾಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ, ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿ ನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ನೀವು ಅವರೊಂದಿಗೆ ದೇವರ ಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗಿರುವಿರಿ.
Kannada BSI Bible 2016
ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರೊಳಗೆ ಜೀವಹತ್ಯ ಸಂಬಂಧದಲ್ಲಿಯಾಗಲಿ ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ ಅದು ನಿಮ್ಮ ಮುಂದೆ ಬರುವದಾದರೆ ನಿಮ್ಮ ಸಹೋದರರು ಯೆಹೋವನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆಯೂ ನೀವು ಅವರೊಂದಿಗೆ ದೇವಕೋಪಕ್ಕೆ ಗುರಿಯಾಗದಂತೆಯೂ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವದಾದರೆ ನೀವು ನಿರ್ದೋಷಿಗಳಾಗಿರುವಿರಿ.
Kannada Bible (KNCL) BSI 2016
ಜುದೇಯದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರಲ್ಲಿ ಜೀವಹತ್ಯ ಸಂಬಂಧದಲ್ಲಿಯಾಗಲಿ ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಸರ್ವೇಶ್ವರನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ಹಾಗೂ ನೀವು ಅವರೊಂದಿಗೆ ದೇವಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಜೀವಹತ್ಯ, ನ್ಯಾಯಕ್ಕೂ, ಆಜ್ಞೆಗೂ, ನಿಯಮಗಳಿಗೂ, ನ್ಯಾಯತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ, ರೌದ್ರವು ನಿಮ್ಮ ಮೇಲೆಯೂ, ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ. ಆಗ ನೀವು ಅಪರಾಧವಿಲ್ಲದವರಾಗಿರುವಿರಿ.