2 Chronicles 22:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಬಳಿಕ ಯೇಹು ಅಹಜ್ಯನಿಗಾಗಿ ಹುಡುಕಿದನು. ಅಹಜ್ಯನು ಸಮಾರ್ಯದಲ್ಲಿ ಅವಿತುಕೊಂಡಿರುವದನ್ನು ಕಂಡ ಯೇಹುವಿನ ಸಂಗಡಿಗರು ಅವನನ್ನು ಹಿಡಿದು ಯೇಹುವಿನ ಬಳಿಗೆ ತಂದರು. ಅಲ್ಲಿ ಅಹಜ್ಯನನ್ನು ಕೊಂದು ಅವನ ದೇಹವನ್ನು ಹೂಳಿಟ್ಟರು. ಅವರು, “ಅಹಜ್ಯನು ಯೆಹೋಷಾಫಾಟನ ಸಂತತಿಯವನಾಗಿದ್ದನು. ಯೆಹೋಷಾಫಾಟನು ತನ್ನ ಪೂರ್ಣಹೃದಯದಿಂದ ಯೆಹೋವನನ್ನು ಹಿಂಬಾಲಿಸಿದನಲ್ಲವೇ?” ಎಂದು ಹೇಳಿದರು. ಯೆಹೂದ ಸಾಮ್ರಾಜ್ಯವನ್ನು ಒಂದಾಗಿಡಲು ಅಹಜ್ಯನ ಕುಟುಂಬಕ್ಕೆ ಶಕ್ತಿಯಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ಕೊಂದರು, “ಇವನು ಪೂರ್ಣಹೃದಯದಿಂದ ಯೆಹೋವನನ್ನು ಹುಡುಕಿದ, ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವುದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.
Kannada BSI Bible 2016
ಇದಲ್ಲದೆ ಅವನು ಅಹಜ್ಯನನ್ನು ಹುಡುಕಿದನು; ಅವನು ಸಮಾರ್ಯದಲ್ಲಿ ಬಚ್ಚಿಟ್ಟು ಕೊಂಡದ್ದರಿಂದ ಅವನನ್ನು ಹಿಡಿದು ಯೇಹು ವಿನ ಬಳಿಗೆ ಅವನನ್ನು ತಕ್ಕೊಂಡು ಬಂದು ಅವನನ್ನು ಕೊಂದುಹಾಕಿ ಹೂಣಿಟ್ಟರು; ಯಾಕಂದರೆ ಇವನು ತನ್ನ ಪೂರ್ಣಹೃದಯದಿಂದ ಕರ್ತನನ್ನು ಹುಡುಕಿದ ಯೆಹೋಷಾಫಾಟನ ಮಗನು ಅಂದರು. ಹೀಗೆ ರಾಜ್ಯ ವನ್ನು ಸ್ಥಿರಪಡಿಸಲು ಅಹಜ್ಯನ ಮನೆಗೆ ಶಕ್ತಿ ಇಲ್ಲದೆ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರ್ಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದು ತಂದು ವಧಿಸಿ - ಇವನು ಯೆಹೋವನ ಯಥಾರ್ಥಭಕ್ತನಾದ ಯೆಹೋಷಾಫಾಟನ ಮೊಮ್ಮಗನಾಗಿರುತ್ತಾನಲ್ಲವೇ ಅಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.
Kannada Bible (KNCL) BSI 2016
ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರಿಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದುತಂದು, ವಧಿಸಿದರು. “ಇವನು ಸರ್ವೇಶ್ವರನ ನೈಜಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ?” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳಲು ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.