2 Chronicles 23:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ರಾಜಕುಮಾರನನ್ನು ಹೊರತಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟರು. ಅವನ ಕೈಗೆ ಧರ್ಮಶಾಸ್ತ್ರದ ಪ್ರತಿಯನ್ನು ಕೊಟ್ಟು ಅವನನ್ನು ತಮ್ಮ ರಾಜನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಗಂಡುಮಕ್ಕಳೂ ಯೆಹೋವಾಷನನ್ನು ಅಭಿಷೇಕಿಸಿದರು. “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಯೆಹೋಯಾದನ ಮಕ್ಕಳು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ಅಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ” ಎಂದು ಹರಸಿದರು.
Kannada BSI Bible 2016
ಆಗ ಅವರು ಅರಸನ ಮಗನನ್ನು ಹೊರಕ್ಕೆ ಕರತಂದು ಅವನ ತಲೆಯ ಮೇಲೆ ಕಿರೀಟ ವನ್ನಿಟ್ಟು ಸಾಕ್ಷಿಯನ್ನು ಕೊಟ್ಟು ಅವನನ್ನು ಅರಸನನ್ನಾಗಿ ಮಾಡಿದರು. ಯೆಹೋಯಾದನೂ ಅವನ ಮಕ್ಕಳೂ ಅವನನ್ನು ಅಭಿಷೇಕಿಸಿ--ದೇವರು ಅರಸನನ್ನು ರಕ್ಷಿಸಲಿ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು ಕೈಯಲ್ಲಿ ಧರ್ಮಶಾಸ್ತ್ರವನ್ನು ಕೊಟ್ಟು ಅವನಿಗೆ ರಾಜ್ಯಾಭಿಷೇಕಮಾಡಿದರು. ಕೂಡಲೆ ಜನರು - ಅರಸನು ಚಿರಂಜೀವಿಯಾಗಿರಲಿ ಎಂದು ಹರಸಿದರು.
Kannada Bible (KNCL) BSI 2016
ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜಾಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.