2 Chronicles 28:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ನಾಯಕರುಗಳು ಎದ್ದು ಸೆರೆಯವರಿಗೆ ಸಹಾಯ ಮಾಡಿದರು. ಇಸ್ರೇಲ್ ಸೈನಿಕರು ಸೂರೆಮಾಡಿದ ಬಟ್ಟೆಬರೆಗಳನ್ನು ಈ ನಾಯಕರು ಪಡೆದುಕೊಂಡು ಬೆತ್ತಲೆಯಾಗಿದ್ದ ಸೆರೆಯವರಿಗೆ ಕೊಟ್ಟರು. ಅವರ ಕಾಲಿಗೆ ಕೆರಗಳನ್ನು ಕೊಟ್ಟು, ಊಟೋಪಚಾರಗಳಿಂದ ಸತ್ಕರಿಸಿದರು. ಗಾಯಗೊಂಡವರಿಗೆ ಎಣ್ಣೆ ಹಚ್ಚಿ ಅವರಲ್ಲಿದ್ದ ಬಲಹೀನರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಜೆರಿಕೊವಿನಲ್ಲಿದ್ದ ಅವರವರ ಮನೆಗಳಿಗೆ ಕರೆದುಕೊಂಡು ಹೋದರು. ಜೆರಿಕೊವಿಗೆ “ಖರ್ಜೂರ ಮರಗಳ ಊರು” ಎಂಬ ಹೆಸರಿದೆ. ಅನಂತರ ಆ ನಾಲ್ಕು ಮಂದಿ ನಾಯಕರು ಸಮಾರ್ಯದಲ್ಲಿದ್ದ ತಮ್ಮ ಮನೆಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಹೆಸರು ಕೂಗಿದ ಪುರುಷರು ಎದ್ದು ಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವುದಕ್ಕೆ ಬಟ್ಟೆಗಳನ್ನೂ, ಕಾಲಿಗೆ ಚಪ್ಪಲಿಗಳನ್ನು ಕೊಟ್ಟರು. ಎಲ್ಲರಿಗೂ ಅನ್ನಪಾನಗಳನ್ನಿಟ್ಟು ತೈಲಹಚ್ಚಿದರು. ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋಗಿ, ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರ್ಯಕ್ಕೆ ಹಿಂತಿರುಗಿ ಬಂದರು.
Kannada BSI Bible 2016
ಆಗ ಹೆಸರಿನಿಂದ ಹೇಳಲ್ಪಟ್ಟ ಆ ಮನು ಷ್ಯರು ಎದ್ದು ಸೆರೆಯವರನ್ನು ತೆಗೆದುಕೊಂಡು ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವದಕ್ಕೂ ಕುಡಿಯುವದಕ್ಕೂ ಕೊಟ್ಟು ಅವರ ತಲೆಗಳಿಗೆ ಎಣ್ಣೆ ಯನ್ನು ಹಚ್ಚಿ ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ಕರಕೊಂಡು ಹೋಗಿ ಸಮಾರ್ಯಕ್ಕೆ ಹಿಂತಿರುಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಉಡುವದಕ್ಕೆ ಬಟ್ಟೆಗಳನ್ನೂ ಕಾಲಿಗೆ ಕೆರಗಳನ್ನೂ ಕೊಟ್ಟು ಅನ್ನಪಾನಗಳನ್ನಿತ್ತು ತೈಲಹಚ್ಚಿ ಬಳಲಿ ಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ ಎಲ್ಲರನ್ನೂ ಯೆರಿಕೋವೆಂಬ ಖರ್ಜೂರ ನಗರಕ್ಕೆ ಕರಕೊಂಡುಹೋಗಿ ಅವರ ಬಂಧುಗಳ ಹತ್ತಿರ ಬಿಟ್ಟು ಸಮಾರ್ಯಕ್ಕೆ ಹಿಂದಿರುಗಿದರು.
Kannada Bible (KNCL) BSI 2016
ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಬಂದ ಬಟ್ಟೆಗಳನ್ನೂ, ಕಾಲಿಗೆ ಕೆರಗಳನ್ನೂ ಕೊಟ್ಟರು; ಅನ್ನಪಾನಗಳನ್ನಿತ್ತು, ತೈಲಹಚ್ಚಿದರು; ಬಳಲಿಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಜೆರಿಕೋ ಎಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋದರು; ಅಲ್ಲಿ ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರಿಯಕ್ಕೆ ಹಿಂದಿರುಗಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.