2 Chronicles 31:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಸ್ಕಹಬ್ಬದ ಆಚರಣೆಯು ಮುಕ್ತಾಯವಾಯಿತು. ಇಸ್ರೇಲಿನಿಂದ ಜೆರುಸಲೇಮಿಗೆ ಬಂದಿದ್ದವರು ಯೆಹೂದದ ಪಟ್ಟಣಗಳಿಗೆ ಹೋದರು. ಅಲ್ಲಿದ್ದ ಕಲ್ಲಿನ ವಿಗ್ರಹಗಳನ್ನು ಒಡೆದು ನಾಶಮಾಡಿದರು; ಅಶೇರಸ್ತಂಭಗಳನ್ನು ಮತ್ತು ಪೂಜಾಸ್ಥಳಗಳನ್ನು ಕೆಡವಿಹಾಕಿದರು. ಹೀಗೆ ಅವರು ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲೆಲ್ಲಾ ಸಂಚಾರ ಮಾಡಿದರು. ಆ ಜನರು ಎಫ್ರಾಯೀಮ್ ಮನಸ್ಸೆ ಪ್ರಾಂತ್ಯಗಳಲ್ಲಿಯೂ ಹಾಗೆಯೇ ಮಾಡಿದರು. ವಿಗ್ರಹಗಳನ್ನು ಪೂಜಿಸಲು ಮಾಡಿದ ಎಲ್ಲಾ ವಸ್ತುಗಳನ್ನು ನಾಶಮಾಡಿದರು. ಬಳಿಕ ಆ ಇಸ್ರೇಲರೆಲ್ಲಾ ತಮ್ಮತಮ್ಮ ಮನೆಗಳಿಗೆ ಹಿಂದಿರುಗಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಾದನಂತರ ನೆರೆದುಬಂದ ಇಸ್ರಾಯೇಲರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು, ಅಶೇರ ವಿಗ್ರಹ ಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ, ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತ್ಯಗಳಲ್ಲದೆ ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳಲ್ಲಿಯೂ ಯಾವುದೊಂದನ್ನೂ ಉಳಿಸಲಿಲ್ಲ. ಆ ಮೇಲೆ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.
Kannada BSI Bible 2016
ಇದೆಲ್ಲಾ ತೀರಿದ ತರುವಾಯ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲ್ಯರು ಯೆಹೂ ದದ ಪಟ್ಟಣಗಳಿಗೆ ಹೊರಟು ಹೋಗಿ ವಿಗ್ರಹಗಳನ್ನು ಮುರಿದು ತೋಪುಗಳನ್ನು ಕಡಿದು ಸಮಸ್ತ ಯೆಹೂದ ಬೆನ್ಯಾವಿಾನ್ ಎಫ್ರಾಯಾಮ್ ಮನಸ್ಸೆ ದೇಶಗಳಲ್ಲಿ ಅವುಗಳನ್ನೆಲ್ಲಾ ತೀರಿಸುವ ಪರ್ಯಂತರ ಉನ್ನತ ಸ್ಥಳ ಗಳನ್ನೂ ಬಲಿಪೀಠಗಳನ್ನೂ ಕೆಡವಿಹಾಕಿದರು. ಆಗ ಇಸ್ರಾಯೇಲ್ ಮಕ್ಕಳೆಲ್ಲರು ತಮ್ಮ ತಮ್ಮ ಸ್ವಾಸ್ತ್ಯಗ ಳಿಗೂ ತಮ್ಮ ತಮ್ಮ ಪಟ್ಟಣಗಳಿಗೂ ತಿರಿಗಿಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಾದನಂತರ ನೆರೆದುಬಂದ ಇಸ್ರಾಯೇಲ್ಯರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು ಅಶೇರವಿಗ್ರಹಸ್ತಂಭಗಳನ್ನು ಕಡಿದುಹಾಕಿ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಲ್ಲದೆ ಎಫ್ರಾಯೀಮ್ ಮನಸ್ಸೆ ಪ್ರಾಂತಗಳಲ್ಲಿಯೂ ಯಾವದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.
Kannada Bible (KNCL) BSI 2016
ಇದಾದನಂತರ ನೆರೆದುಬಂದ ಇಸ್ರಯೇಲರೆಲ್ಲರು ಜುದೇಯ ನಾಡಿನ ಪಟ್ಟಣಗಳಿಗೆ ಹೋಗಿ ಕಲ್ಲುಕಂಬಗಳನ್ನು ಒಡೆದು, ಆಶೇರ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಜುದೇಯ ಹಾಗು ಬೆನ್ಯಾಮೀನ್ ಪ್ರಾಂತಗಳಲ್ಲಿ ಮಾತ್ರವಲ್ಲ, ಎಫ್ರಯಿಮ್, ಮನಸ್ಸೆ ಪ್ರಾಂತಗಳಲ್ಲೂ ಯಾವುದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಯೇಲರೆಲ್ಲರೂ ತಮ್ಮ ತಮ್ಮ ಆಸ್ತಿಪಾಸ್ತಿಯಿದ್ದ ಪಟ್ಟಣಗಳಿಗೆ ಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.