2 Kings 12:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವಾಷನು ಯಾಜಕರಿಗೆ, “ದೇವಾಲಯದಲ್ಲಿ ಬಹಳ ಹಣವಿದೆ. ಜನರು ಅನೇಕ ವಸ್ತುಗಳನ್ನು ಆಲಯಕ್ಕೆ ಕೊಟ್ಟಿದ್ದಾರೆ. ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಜನರು ಆಲಯದ ತೆರಿಗೆಯನ್ನು ಕೊಟ್ಟಿದ್ದಾರೆ. ಜನರು ತಮ್ಮ ಸ್ವ ಇಚ್ಛೆಯಿಂದ ಹಣವನ್ನು ಕೊಟ್ಟಿದ್ದಾರೆ. ಯಾಜಕರಾದ ನೀವು ಆ ಹಣವನ್ನು ತೆಗೆದುಕೊಂಡು, ಯೆಹೋವನ ಆಲಯವನ್ನು ಸರಿಪಡಿಸಿ. ಪ್ರತಿಯೊಬ್ಬ ಯಾಜಕನೂ ತಾನು ಜನರ ಸೇವೆಯಿಂದ ಪಡೆದ ಹಣವನ್ನು ಉಪಯೋಗಿಸಲೇಬೇಕು. ಅವನು ಆ ಹಣವನ್ನು ದೇವಾಲಯದ ಶಿಥಿಲತೆಯನ್ನು ಸರಿಪಡಿಸಲು ಉಪಯೋಗಿಸಲೇಬೇಕು” ಎಂದು ಹೇಳಿದನು. (Verses 4-5)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವಾಷನು ಯಾಜಕರಿಗೆ, “ನೀವು ಯೆಹೋವನ ಆಲಯಕ್ಕೆ ಸೇರಿದ ಎಲ್ಲಾ ಪರಿಶುದ್ಧ ದ್ರವ್ಯವನ್ನು ಅಂದರೆ ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನೂ ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಛೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು,
Kannada BSI Bible 2016
ಆಗ ಯೆಹೋವಾಷನು ಯಾಜಕರಿಗೆ--ಕರ್ತನ ಮನೆಗೆ ತರಲ್ಪಟ್ಟ ಪ್ರತಿಷ್ಠಿತವಾದವುಗಳ ಹಣವೆಲ್ಲ ವನ್ನೂ ಹಾದು ಹೋಗುವ ಪ್ರತಿ ಮನುಷ್ಯನ ಹಣ ವನ್ನೂ ಪ್ರಾಣಗಳ ಎಣಿಕೆಯ ಹಣವನ್ನೂ ಪ್ರತಿ ಮನುಷ್ಯನು ತನ್ನ ಇಚ್ಚೆಯ ಪ್ರಕಾರ ಕರ್ತನ ಆಲಯಕ್ಕೆ ಕೊಡಬೇಕೆಂದು ತಕ್ಕೊಂಡು ಬಂದ ಹಣವೆಲ್ಲವನ್ನೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವಾಷನು ಯಾಜಕರಿಗೆ - ನೀವು ಯೆಹೋವನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧದ್ರವ್ಯವನ್ನು ಅಂದರೆ ಖಾನೇಷುಮಾರಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಫೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು
Kannada Bible (KNCL) BSI 2016
ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೋವಾಷನು ಯಾಜಕರಿಗೆ, “ಯೆಹೋವ ದೇವರ ಆಲಯಕ್ಕೆ ಪವಿತ್ರ ಅರ್ಪಣೆಗಳಾಗಿ ತರಲಾದ ಜನಗಣತಿಯಲ್ಲಿ ಸಂಗ್ರಹಿಸಿದ ಹಣ, ವೈಯಕ್ತಿಕ ಪ್ರತಿಜ್ಞೆಗಳಿಂದ ಪಡೆದ ಹಣ ಮತ್ತು ದೇವಾಲಯಕ್ಕೆ ಸ್ವಯಂಪ್ರೇರಣೆಯಿಂದ ತಂದ ಹಣವನ್ನು ಸಂಗ್ರಹಿಸಿರಿ ಎಂದನು.