2 Kings 22:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ಯೋಷೀಯನು, “ಈಗ ನಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಿ. ನನಗಾಗಿ, ಜನರಿಗಾಗಿ ಮತ್ತು ಎಲ್ಲಾ ಯೆಹೂದಕ್ಕಾಗಿ ಯೆಹೋವನನ್ನು ಕೇಳಿ. ಈಗ ಸಿಕ್ಕಿರುವ ಈ ಗ್ರಂಥದ ವಾಕ್ಯಗಳನ್ನು ಕುರಿತಾಗಿಯೂ ಕೇಳಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಏಕೆಂದರೆ ನಮ್ಮ ಪೂರ್ವಿಕರು ಈ ಗ್ರಂಥದ ವಾಕ್ಯಗಳಿಗೆ ಕಿವಿಗೊಡಲಿಲ್ಲ; ಅವುಗಳನ್ನು ಕೈಕೊಂಡು ನಡೆಯಲಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳಿಗೆ ಕಿವಿಗೊಡದೆಯೂ, ಅವುಗಳನ್ನು ಕೈಕೊಳ್ಳದೆಯೂ ಹೋದುದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿಯೂ, ಜನರಿಗಾಗಿಯೂ, ಮತ್ತು ಎಲ್ಲಾ ಯೆಹೂದ್ಯರಿಗಾಗಿಯೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥದಲ್ಲಿನ ಧರ್ಮೋಪದೇಶ ವಾಕ್ಯಗಳ ಕುರಿತಾಗಿ ವಿಚಾರಿಸಿರಿ” ಎಂದು ಆಜ್ಞಾಪಿಸಿದನು.
Kannada BSI Bible 2016
ನೀವು ಹೋಗಿ ಸಿಕ್ಕಿದ ಈ ಪುಸ್ತಕದ ಮಾತುಗಳನ್ನು ಕುರಿತು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಕರ್ತನ ಬಳಿಯಲ್ಲಿ ವಿಚಾರಿಸಿರಿ. ಯಾಕಂದರೆ ನಮ್ಮನ್ನು ಕುರಿತು ಬರೆಯಲ್ಪಟ್ಟ ಎಲ್ಲಾದರ ಪ್ರಕಾರ ಮಾಡಲು ನಮ್ಮ ಪಿತೃಗಳು ಈ ಪುಸ್ತಕದ ಮಾತುಗಳನ್ನು ಕೇಳದೆ ಹೋದದರಿಂದ ನಮಗೆ ವಿರೋಧವಾಗಿ ಉರಿ ಯುವ ದೇವರ ಕೋಪವು ದೊಡ್ಡದಾಗಿದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಪೂರ್ವಿಕರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆಯೂ ಅವುಗಳನ್ನು ಕೈಕೊಳ್ಳದೆಯೂ ಹೋದದರಿಂದ ನಾವು ಯೆಹೋವನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದದರಿಂದ ನೀವು ನನಗೋಸ್ಕರವೂ ಜನರಿಗೋಸ್ಕರವೂ ಎಲ್ಲಾ ಯೆಹೂದ್ಯರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
“ನಮ್ಮ ಪೂರ್ವಜರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆ ಹಾಗು ಅವುಗಳನ್ನು ಕೈಕೊಳ್ಳದೆಹೋದುದರಿಂದ ಸರ್ವೇಶ್ವರನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿ ಜನರಿಗಾಗಿ ಹಾಗು ಎಲ್ಲಾ ಯೆಹೂದ್ಯರಿಗಾಗಿ ಸರ್ವೇಶ್ವರನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಜನರಿಗೋಸ್ಕರವೂ, ಸಮಸ್ತ ಯೆಹೂದ್ಯರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ದೇವರ ಮಹಾಕೋಪಕ್ಕೆ ಪಾತ್ರರಾಗಿದ್ದೇವೆ,” ಎಂದನು.