2 Samuel 11:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಸಂದೇಶಕನಿಗೆ, “ನೀನು ಹೋಗಿ ಯೋವಾಬನಿಗೆ: ‘ಇದರಿಂದ ನೀನು ತಳಮಳಗೊಳ್ಳಬೇಡ. ಒಂದೇ ಖಡ್ಗವು ಈ ಹೊತ್ತು ಒಬ್ಬನನ್ನು ಕೊಂದರೆ, ಇನ್ನೊಂದು ದಿನ ಇನ್ನೊಬ್ಬನನ್ನು ಕೊಲ್ಲುವುದು. ರಬ್ಬ ನಗರದ ಮೇಲೆ ಧೈರ್ಯವಾಗಿ ಆಕ್ರಮಣಮಾಡು. ಆಗ ನೀನು ನಗರವನ್ನು ಗೆಲ್ಲುವೆ!’ ಈ ಮಾತುಗಳಿಂದ ಯೋವಾಬನನ್ನು ಹುರಿದುಂಬಿಸು” ಎಂಬುದಾಗಿ ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ದಾವೀದನು ದೂತನಿಗೆ, “ನೀನು ಹೋಗು, ಇದಕ್ಕೋಸ್ಕರ ವ್ಯಸನಪಡಬೇಡ. ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ, ನಾಳೆ ಇನ್ನೊಬ್ಬನನ್ನು ನುಂಗುವುದು, ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬುದಾಗಿ ಅರಸನು ಆಜ್ಞಾಪಿಸುತ್ತಾನೆ ಎಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು” ಎಂದನು.
Kannada BSI Bible 2016
ಆಗ ದಾವೀದನು ಆ ದೂತನಿಗೆ--ನೀನು ಯೋವಾಬನಿಗೆ--ಈ ಕಾರ್ಯ ನಿನಗೆ ಮೆಚ್ಚಿಗೆ ಯಿಲ್ಲದ್ದಾಗಿ ಕಾಣಬಾರದು. ಯಾಕಂದರೆ ಕತ್ತಿಯು ಇವನನ್ನಾದರೂ ಸರಿ ಅವನನ್ನಾದರೂ ಸರಿ ತಿಂದು ಬಿಡುವದು. ನೀನು ಪಟ್ಟಣವನ್ನು ನಿರ್ಮೂಲಮಾಡುವ ಹಾಗೆ ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ ಎಂದು ಹೇಳಿ ಅವನನ್ನು ಬಲಪಡಿಸು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನು ದೂತನಿಗೆ ನೀನು ಹೋಗಿ - ಇದಕ್ಕೋಸ್ಕರವಾಗಿ ವ್ಯಸನ ಪಡಬೇಡ; ಕತ್ತಿಯು ಈ ಹೊತ್ತು ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುವದು. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿರಿ ಎಂಬದಾಗಿ ಅರಸನು ಆಜ್ಞಾಪಿಸುತ್ತಾನೆಂದು ಯೋವಾಬನಿಗೆ ಹೇಳಿ ಅವನನ್ನು ಧೈರ್ಯಪಡಿಸು ಅಂದನು.
Kannada Bible (KNCL) BSI 2016
ಆಗ ದಾವೀದನು ಆ ದೂತನಿಗೆ, “ನೀನು ಹೋಗಿ ಯೋವಾಬನಿಗೆ, ‘ವ್ಯಸನಪಡಬೇಕಾಗಿಲ್ಲ; ಕತ್ತಿ ಈ ದಿನ ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುತ್ತದೆ. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿ, ಎಂಬುದಾಗಿ ಅರಸರು ಆಜ್ಞಾಪಿಸುತ್ತಾರೆ’ ಎಂದು ಹೇಳಿ ಅವನನ್ನು ಧೈರ್ಯಪಡಿಸು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಆ ದೂತನಿಗೆ, “ನೀನು ಯೋವಾಬನಿಗೆ, ‘ಇದು ನಿನ್ನನ್ನು ಕದಲಿಸದಿರಲಿ. ಖಡ್ಗವು ಇವನನ್ನಾದರೂ ಸರಿ, ಅವನನ್ನಾದರೂ ಸರಿ ತಿಂದುಬಿಡುವುದು. ನೀನು ಪಟ್ಟಣವನ್ನು ನಿರ್ಮೂಲ ಮಾಡುವ ಹಾಗೆ, ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ,’ ಎಂದು ಹೇಳಿ, ಅವನನ್ನು ಬಲಪಡಿಸು,” ಎಂದನು.