2 Samuel 13:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.
Kannada BSI Bible 2016
ಆದರೆ ಅಬ್ಷಾಲೋಮನು ತನ್ನ ಸೇವಕರಿಗೆ--ನೀವು ನೋಡಿಕೊಳ್ಳಿರಿ; ಅಮ್ನೋನನ ಹೃದಯವು ದ್ರಾಕ್ಷಾರಸ ದಿಂದ ಸಂಭ್ರಮವಾಗಿರುವಾಗ ನಾನು ನಿಮಗೆ ಅಮ್ನೋನ ನನ್ನು ಹೊಡೆಯಿರಿ ಎಂದು ಹೇಳುತ್ತಲೇ ಅವನನ್ನು ಕೊಂದುಹಾಕಿರಿ; ಭಯಪಡಬೇಡಿರಿ ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ. ಬಲವಾಗಿರಿ; ಪರಾಕ್ರಮಿಗಳಾ ಗಿರ್ರಿ; ಎಂದು ಆಜ್ಞಾಪಿಸಿ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ - ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ; ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೋ? ಧೈರ್ಯದಿಂದಿರಿ, ಶೂರರಾಗಿರಿ ಎಂದು ಹೇಳಿದ್ದನು.
Kannada Bible (KNCL) BSI 2016
ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದಕೂಡಲೆ ಅವನನ್ನು ಹೊಡೆದು ಕೊಂದುಹಾಕಿ; ಹೆದರಬೇಡಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೆ? ಧೈರ್ಯದಿಂದಿರಿ, ಶೂರರಾಗಿರಿ,” ಎಂದು ಹೇಳಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.