2 Samuel 24:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ದಾವೀದನು ಅಲ್ಲಿ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ನಿರ್ಮಿಸಿದನು. ದಾವೀದನು ಸರ್ವಾಂಗಹೋಮಗಳನ್ನು ಮತ್ತು ಸಮಾಧಾನಯಜ್ಞಗಳನ್ನು ಸಮರ್ಪಿಸಿದನು. ಅವನು ದೇಶಕ್ಕಾಗಿ ಮಾಡಿದ ಪ್ರಾರ್ಥನೆಗೆ ಯೆಹೋವನು ಉತ್ತರಕೊಟ್ಟನು. ಯೆಹೋವನು ಇಸ್ರೇಲಿನ ರೋಗರುಜಿನಗಳನ್ನು ನಿಲ್ಲಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿ ಅವನು ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ, ಅದರ ಮೇಲೆ ಆತನಿಗೆ ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ವ್ಯಾಧಿಯು ಗುಣವಾಯಿತು.
Kannada BSI Bible 2016
ಆಗ ದಾವೀದನು ಕರ್ತನಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ ದಹನಬಲಿಗಳನ್ನೂ ಸಮಾ ಧಾನದಬಲಿಗಳನ್ನೂ ಅರ್ಪಿಸಿದನು. ಹೀಗೆ ಕರ್ತನು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ ಇಸ್ರಾ ಯೇಲಿನ ಕಡೆಯಿಂದ ಆ ಬಾಧೆಯು ನಿಂತಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗ ಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ಸಂಹಾರಕವ್ಯಾಧಿಯು ನಿಂತುಹೋಯಿತು.
Kannada Bible (KNCL) BSI 2016
ಅಲ್ಲಿ ಸರ್ವೇಶ್ವರನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಅವರಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಅರ್ಪಿಸಿದನು. ಹೀಗೆ ನಾಡಿನ ಮೇಲಿದ್ದ ಸರ್ವೇಶ್ವರನ ಕೋಪ ಶಮನವಾಯಿತು. ಇಸ್ರಯೇಲರಲ್ಲಿದ್ದ ಆ ಸಂಹಾರಕವ್ಯಾಧಿ ನಿಂತುಹೋಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.