Amos 1:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೇಳುವುದೇನೆಂದರೆ, “ಅನೇಕ ಅಪರಾಧಗಳನ್ನು ಮಾಡಿದ ತೂರಿನ ಜನರನ್ನು ನಾನು ಖಂಡಿತವಾಗಿ ಶಿಕ್ಷಿಸುವೆನು. ಯಾಕೆಂದರೆ ಅವರು ಒಂದು ಜನಾಂಗದ ಜನರನ್ನೆಲ್ಲಾ ಗುಲಾಮರನ್ನಾಗಿ ಎದೋಮಿಗೆ ಕಳುಹಿಸಿದರು. ಅವರು ತಮ್ಮ ಸಹೋದರರೊಂದಿಗೆ (ಇಸ್ರೇಲಿನೊಂದಿಗೆ) ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ: “ತೂರ್ ಪಟ್ಟಣವು ಬಹಳ ದ್ರೋಹಗಳನ್ನು ಮಾಡಿದ್ದರಿಂದ, ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೇ, ಜನರನ್ನು ಗುಂಪುಗುಂಪಾಗಿ ಎದೋಮಿಗೆ ವಶಮಾಡಿಬಿಟ್ಟಿತು.
Kannada BSI Bible 2016
ಕರ್ತನು ಹೀಗೆ ಹೇಳುತ್ತಾನೆ--ತೂರಿನ ಮೂರು ಮತ್ತು ನಾಲ್ಕರ ನಿಮಿತ್ತ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದಿಲ್ಲ; ಅವರು ಸಹೋದರರ ಒಡಂಬ ಡಿಕೆಯನ್ನು ಜ್ಞಾಪಕಮಾಡಲಿಲ್ಲ; ಪೂರ್ಣ ಸೆರೆಯನ್ನು ಎದೋಮಿಗೆ ಒಪ್ಪಿಸಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ತೂರ್ ಪಟ್ಟಣವು ಮೂರು ಹೌದು ನಾಲ್ಕು ದ್ರೋಹಗಳನ್ನು ಮಾಡಿದ್ದರಿಂದ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವದೇ ಇಲ್ಲ; ಅದು ಒಡಹುಟ್ಟಿದವರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಜನರನ್ನು ಗುಂಪುಗುಂಪಾಗಿ ಎದೋವಿುಗೆ ವಶಮಾಡಿಬಿಟ್ಟಿತಷ್ಟೆ;
Kannada Bible (KNCL) BSI 2016
ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.