Amos 4:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಿಮ್ಮ ಬೆಳೆಗಳು ಸೂರ್ಯನ ಶಾಖದಿಂದಲೂ ರೋಗದಿಂದಲೂ ಸಾಯುವಂತೆ ಮಾಡಿದೆನು. ನಿಮ್ಮ ತೋಟಗಳನ್ನೂ ದ್ರಾಕ್ಷಿತೋಟಗಳನ್ನೂ ನಾನು ನಾಶಮಾಡಿದೆನು. ಮಿಡತೆಗಳು ನಿಮ್ಮ ಅಂಜೂರದ ಮತ್ತು ಆಲೀವ್ ಮರಗಳನ್ನು ತಿಂದುಬಿಟ್ಟವು. ಆದಾಗ್ಯೂ ಸಹಾಯಕ್ಕಾಗಿ ನೀವು ನನ್ನ ಬಳಿಗೆ ಬರಲಿಲ್ಲ.” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮ್ಮನ್ನು ಬೂದಿಯಿಂದಲೂ, ಬಿಸಿಗಾಳಿಯಿಂದಲೂ ಬಾಧಿಸಿದೆನು. ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷಿತೋಟಗಳನ್ನು, ಅಂಜೂರದ ಗಿಡಗಳನ್ನು, ನಿಮ್ಮ ಎಣ್ಣೆಯ ಮರಗಳನ್ನು ಮಿಡತೆಯು ತಿಂದುಬಿಟ್ಟಿತು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.
Kannada BSI Bible 2016
ನಿಮ್ಮ ಪೈರನ್ನು ಹಾಳುಮಾಡುವ ಬಿರುಗಾಳಿಯಿಂದ ಹೊಡೆದಿದ್ದೇನೆ; ನಿಮ್ಮ ತೋಟಗಳು, ದ್ರಾಕ್ಷೇತೋಟ ಗಳು, ಅಂಜೂರದ ಗಿಡಗಳು ಮತ್ತು ಎಣ್ಣೇ ಮರಗಳು ಹೆಚ್ಚಾದಾಗ ಕಂಬಳಿ ಹುಳಗಳು ಅವುಗಳನ್ನು ತಿಂದು ಬಿಟ್ಟವು; ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮನ್ನು ಬೂದಿಯಿಂದಲೂ ಬಿಸಿಗಾಳಿಯಿಂದಲೂ ಬಾಧಿಸಿದೆನು; ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷೆಯ ತೋಟ, ಅಂಜೂರದ ಗಿಡ, ಎಣ್ಣೆಯ ಮರ, ಇವುಗಳನ್ನು ವಿುಡತೆಯು ತಿಂದುಬಿಟ್ಟಿತು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.
Kannada Bible (KNCL) BSI 2016
“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಪೈರು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ಬೂಷ್ಟು ಹಿಡಿದು ನಾಶವಾಗುವಂತೆ ಮಾಡಿದೆ. ನಿಮ್ಮ ವನವೃಕ್ಷಗಳನ್ನೂ ದ್ರಾಕ್ಷಾತೋಟಗಳನ್ನೂ ಹಾಳುಮಾಡಿದೆ. ನಿಮ್ಮ ಅಂಜೂರದ ಗಿಡಗಳನ್ನೂ ಎಣ್ಣೆಮರಗಳನ್ನೂ ಮಿಡತೆಗಳು ತಿಂದುಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಉದ್ಯಾನವನಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ರೋಗ ಮತ್ತು ಶಿಲೀಂಧ್ರವುಗಳಿಂದ ನಾಶವಾಯಿತು. ನಿಮ್ಮ ಅಂಜೂರದ ಗಿಡ ಮತ್ತು ಎಣ್ಣೆಮರಗಳನ್ನೂ ಮಿಡತೆಗಳು ತಿಂದು ಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.