Daniel 6:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜ್ಯದ ಸಕಲ ಮುಖ್ಯಾಧಿಕಾರಿಗಳು, ನಾಯಕರು, ದೇಶಾಧಿಪತಿಗಳು, ಮಂತ್ರಿಗಳು ಮತ್ತು ಸಂಸ್ಥಾನಾಧ್ಯಕ್ಷರು ಸೇರಿ ಒಂದು ಆಲೋಚನೆಯನ್ನು ಮಾಡಿದ್ದಾರೆ. ಈ ಸಂಬಂಧವಾಗಿ ಅರಸನು ಒಂದು ನಿಬಂಧನೆಯನ್ನು ಮಾಡಿ ರಾಜಾಜ್ಞೆಯನ್ನು ಹೊರಡಿಸಬೇಕೆಂದು ನಮ್ಮೆಲ್ಲರ ಅನಿಸಿಕೆ. ಎಲ್ಲರೂ ಆ ರಾಜಾಜ್ಞೆಯನ್ನು ಪಾಲಿಸಬೇಕು. ಆ ನಿಬಂಧನೆ ಹೀಗಿದೆ: ಬರಲಿರುವ ಮೂವತ್ತು ದಿನ ಯಾರೂ ಅರಸನಾದ ನಿನ್ನನ್ನು ಬಿಟ್ಟು ಬೇರೆ ಯಾವ ದೇವರನ್ನಾಗಲಿ ಮನುಷ್ಯನನ್ನಾಗಲಿ ಪ್ರಾರ್ಥಿಸಕೂಡದು. ಯಾರಾದರೂ ಹಾಗೆ ಮಾಡಿದರೆ ಅವರನ್ನು ಸಿಂಹಗಳ ಗುಹೆಯಲ್ಲಿ ಎಸೆಯಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನ್ನ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನನ್ನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞೆಯ ರೂಪವಾಗಿ ವಿಧಿಸುವುದು ಒಳ್ಳೆಯದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ದೇಶಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರೂ ಆಲೋಚನೆ ಮಾಡಿಕೊಂಡಿದ್ದಾರೆ.
Kannada BSI Bible 2016
ರಾಜ್ಯದ ಎಲ್ಲಾ ದೇಶಾಧಿಪತಿಗಳೂ ರಾಜ್ಯಪಾಲರೂ ನಾಯ ಕರೂ ಪ್ರಧಾನರೂ ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನಂದರೆ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾ ಪನೆ ಮಾಡಿದ್ದಾದರೆ ಅಂತವರು ಸಿಂಹದ ಗವಿಯಲ್ಲಿ ಹಾಕಲ್ಪಡುವರೆಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆ ಯನ್ನು ಕೊಡತಕ್ಕದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಮೂವತ್ತು ದಿನಗಳ ತನಕ ರಾಜನಾದ ನಿನಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ವಿಜ್ಞಾಪನೆ ಮಾಡಿಕೊಂಡರೆ ಅವನು ಸಿಂಹಗಳ ಗವಿಯಲ್ಲಿ ಹಾಕಲ್ಪಡಬೇಕು ಎಂಬ ಖಂಡಿತ ನಿಬಂಧನೆಯನ್ನು ರಾಜಾಜ್ಞಾರೂಪವಾಗಿ ವಿಧಿಸುವದು ಒಳ್ಳೇದೆಂದು ರಾಜ್ಯದ ಸಕಲ ಮುಖ್ಯಾಧಿಕಾರಿ ನಾಯಕ ದೇಶಾಧಿಪತಿ ಮಂತ್ರಿ ಸಂಸ್ಥಾನಾಧ್ಯಕ್ಷರೂ ಆಲೋಚನೆಮಾಡಿಕೊಂಡಿದ್ದಾರೆ.
Kannada Bible (KNCL) BSI 2016
ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ಪ್ರಾಂತ್ಯಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರು ಇವರೆಲ್ಲರ ಅಭಿಪ್ರಾಯದ ಪ್ರಕಾರ ತಾವು ಒಂದು ಶಾಸನವನ್ನು ಹೊರಡಿಸಬೇಕು. ಯಾವನೂ ಮೂವತ್ತು ದಿನಗಳ ತನಕ ರಾಜರಾದ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಬಾರದು; ಮಾಡಿದರೆ ಸಿಂಹಗಳ ಗವಿಗೆ ಹಾಕಲಾಗುವುದು ಎಂದು ರಾಜಾಜ್ಞಾರೂಪವಾಗಿ ನಿಷೇಧಿಸುವುದು ಒಳ್ಳೆಯದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ರಾಜ್ಯದ ಎಲ್ಲಾ ದೇಶಾಧಿಪತಿಗಳೂ, ರಾಜ್ಯಪಾಲರೂ, ನಾಯಕರೂ, ಉಪರಾಜರೂ, ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನೆಂದರೆ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ಪ್ರಾರ್ಥನೆ ಮಾಡಿದ್ದಾದರೆ ಅಂಥವರು ಸಿಂಹಗಳ ಗವಿಗೆ ಹಾಕಲಾಗುವುದು ಎಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆಯನ್ನು ಕೊಡತಕ್ಕದ್ದು.