Daniel 7:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪುರಾತನ ರಾಜನು ಬಂದು ನ್ಯಾಯತೀರಿಸುವವರೆಗೂ ಆ ಚಿಕ್ಕಕೊಂಬು ದೇವಭಕ್ತರ ಕೊಲೆ ಮಾಡುತ್ತಿತ್ತು. ಪುರಾತನ ರಾಜನು ಈ ಚಿಕ್ಕ ಕೊಂಬಿನ ಬಗ್ಗೆ ತೀರ್ಪನ್ನು ಕೊಟ್ಟನು. ಈ ತೀರ್ಪು ದೇವಭಕ್ತರ ಪರವಾಗಿತ್ತು. ಆದ್ದರಿಂದ ಅವರು ಸಾಮ್ರಾಜ್ಯವನ್ನು ಪಡೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಭಕ್ತರೊಂದಿಗೆ ಯುದ್ಧಮಾಡಿ, ಮಹಾವೃದ್ಧನು ಬಂದು ಪರಾತ್ಪರನಾದ ದೇವರ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.”
Kannada BSI Bible 2016
ಪೂರ್ವಿಕನ ಕಾಲ ಬಂದು ಮಹೋನ್ನತನ ಪರಿ ಶುದ್ಧರಿಗೆ ನ್ಯಾಯತೀರ್ಪು ಕೊಡುವ ವರೆಗೂ ಪರಿ ಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದ ವರೆಗೂ ಅವರ ಮೇಲೆ ಜಯವನ್ನು ಹೊಂದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾವೃದ್ಧನು ಅಯ್ತಂದು ಪರಾತ್ಪರನ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದು ಕಣ್ಣುಳ್ಳದ್ದಾಗಿ ಬಾಯಿಂದ ಬಡಾಯಿಕೊಚ್ಚಿಕೊಳ್ಳುತ್ತಾ ವಿುಕ್ಕ ಕೊಂಬುಗಳಿಗಿಂತ ಬಿರಸಾಗಿ ನೋಡುತ್ತಾ ಇತ್ತೋ ಆ ಕೊಂಬಿನ ವಿಷಯವಾಗಿಯೂ ಸತ್ಯಾರ್ಥವನ್ನು ತಿಳಿದುಕೊಳ್ಳಬೇಕೆಂದು ಅಪೇಕ್ಷಿಸಿ ವಿಚಾರಿಸಿದೆನು.
Kannada Bible (KNCL) BSI 2016
ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪುರಾತನ ಮನುಷ್ಯನು ಬಂದು ಮಹೋನ್ನತನ ಪರಿಶುದ್ಧರಿಗೆ ನ್ಯಾಯತೀರ್ಪು ಕೊಡುವವರೆಗೂ, ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದವರೆಗೂ ಅವರ ಮೇಲೆ ಜಯವನ್ನು ಹೊಂದಿತು.