Deuteronomy 21:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಊರಿನಲ್ಲಿದ್ದ ಲೇವಿಯರೂ ಅಲ್ಲಿಗೆ ಹೋಗಬೇಕು. ಯೆಹೋವನು ಅವರ ಜನರನ್ನು ಆತನ ಹೆಸರಿನಲ್ಲಿ ಆಶೀರ್ವದಿಸುವುದಕ್ಕಾಗಿಯೂ ತನ್ನ ಸೇವೆ ಮಾಡುವುದಕ್ಕಾಗಿಯೂ ಆರಿಸಿದ್ದಾನೆ. ಎಲ್ಲಾ ವಾಗ್ವಾದಗಳನ್ನು ಯಾಜಕನೇ ಇತ್ಯರ್ಥಮಾಡುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೇವಿ ಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಬರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಆರಿಸಿಕೊಂಡಿದ್ದಾನಲ್ಲಾ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸುವವರು, ಅವರ ಮಾತುಗಳನ್ನು ಕೇಳಿರಿ.
Kannada BSI Bible 2016
ಆ ಮೇಲೆ ಲೇವಿಯ ಕುಮಾರರಾದ ಯಾಜಕರು ಹತ್ತಿರ ಬರಬೇಕು; ಅವರನ್ನು ನಿನ್ನ ದೇವರಾದ ಕರ್ತನು ತನಗೆ ಸೇವೆಮಾಡುವದಕ್ಕೂ ಕರ್ತನ ಹೆಸರಿನಲ್ಲಿ ಆಶೀರ್ವಾದ ಕೊಡುವದಕ್ಕೂ ಆದುಕೊಂಡಿದ್ದಾನೆ; ಅವರ ಮಾತಿನಿಂದ ಎಲ್ಲಾ ವಿವಾದ ಗಳಿಗೂ ಎಲ್ಲಾ ಪೆಟ್ಟುಗಳಿಗೂ ತೀರ್ಪು ಆಗಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರವಿರಬೇಕು. ನಿಮ್ಮ ದೇವರಾದ ಯೆಹೋವನು ಅವರನ್ನೇ ತನ್ನ ಸಾನ್ನಿಧ್ಯಸೇವೆಯನ್ನು ಮಾಡುವದಕ್ಕೂ ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವದಕ್ಕೂ ಆದುಕೊಂಡಿದ್ದಾನಲ್ಲ; ಅನುಮಾನವಾದ ಎಲ್ಲಾ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.
Kannada Bible (KNCL) BSI 2016
ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಲೇವಿಯ ಪುತ್ರರಾದ ಯಾಜಕರು ಹತ್ತಿರ ಇರಬೇಕು. ಏಕೆಂದರೆ ಅವರನ್ನೇ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಸೇವೆ ಮಾಡುವುದಕ್ಕೂ ಯೆಹೋವ ದೇವರ ಹೆಸರಿನಲ್ಲಿ ಆಶೀರ್ವಾದ ಕೊಡುವುದಕ್ಕೂ ಎಲ್ಲಾ ವಿವಾದ ಹೊಡೆದಾಟಗಳ ವಿಷಯದಲ್ಲಿ ತೀರ್ಮಾನಿಸುವುದಕ್ಕೂ ಆಯ್ದುಕೊಂಡಿದ್ದಾರೆ.