Esther 4:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೊರ್ದೆಕೈ, ಸಾಮ್ರಾಜ್ಯದಲ್ಲಿರುವ ಎಲ್ಲಾ ಅಧಿಕಾರಿಗಳಿಗೂ ಪ್ರಜೆಗಳಿಗೂ ತಿಳಿದಿರುವ ಒಂದು ವಿಷಯವೇನೆಂದರೆ, ರಾಜನು ಕರೆಯದೆ ಯಾರಾದರೂ ಆತನ ಬಳಿಗೆ ಹೋದರೆ ಅದಕ್ಕೆ ಮರಣದಂಡನೆಯೇ ಶಿಕ್ಷೆ ಎಂಬುದು. ರಾಜನು ತನ್ನ ಬಂಗಾರದ ದಂಡನ್ನು ಯಾರ ಮೇಲೆ ತೋರಿಸುವನೋ ಅವನು ಮರಣಶಿಕ್ಷೆಯಿಂದ ಪಾರಾಗುವನು. ಈಗ ರಾಜನು ನನ್ನನ್ನು ಕರೆದು ಮೂವತ್ತು ದಿವಸಗಳಾದವು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅರಸನು ತನ್ನ ಬಳಿಗೆ ಬರಲು ಹೇಳಿದ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀಪುರುಷರಿಗುಂಟು. ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು ಎಂಬುದು ಅರಸನ ಎಲ್ಲಾ ಸೇವಕರಿಗೂ ಮತ್ತು ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತು. ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವಾಗಲಿಲ್ಲ” ಎಂದು ಹೇಳಿಸಿದಳು.
Kannada BSI Bible 2016
ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನು ಕರಿಸಿದರೆ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀ ಪುರುಷರಿಗುಂಟು; ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರೆಂಬದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತುಂಟಲ್ಲಾ; ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವದಕ್ಕೆ ಆಮಂತ್ರಣವಾಗಲಿಲ್ಲ ಎಂದು ಹೇಳಿಸಿದಳು.
Kannada Bible (KNCL) BSI 2016
“ಅರಸನು ಹೇಳಿಕಳುಹಿಸಿದ ಹೊರತು ಅವನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವವರು ಮರಣದಂಡನೆಗೆ ಗುರಿಯಾಗುವರು ಎಂಬ ನಿಷೇಧಾಜ್ಞೆ ಸ್ತ್ರೀಪುರುಷರೆನ್ನದೆ ಎಲ್ಲರಿಗೂ ಅನ್ವಯಿಸುತ್ತದೆ. ಯಾರ ಕಡೆಗೆ ಅವನು ತನ್ನ ಸ್ವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು. ಇದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ನಿವಾಸಿಗಳಿಗೂ ತಿಳಿದ ವಿಷಯ; ನನಗಂತೂ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.