Esther 8:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ರಾಜಾಜ್ಞೆಯು ಹೀಗಿತ್ತು: “ಪ್ರತಿಯೊಂದು ನಗರಗಳಲ್ಲಿರುವ ಯೆಹೂದ್ಯರು ಸ್ವರಕ್ಷಣೆಗೋಸ್ಕರ ಒಟ್ಟಾಗಿ ಸೇರಿಬರಲು ಅವರಿಗೆ ಹಕ್ಕಿದೆ. ಅಲ್ಲದೆ ಅವರನ್ನು ಕೊಲ್ಲಲು, ಆಸ್ತಿ ಅಪಹರಿಸಲು ಅವರನ್ನು ನಿರ್ಮೂಲ ಮಾಡುವ ಉದ್ದೇಶದಿಂದ ಅವರ ಬಳಿಗೆ ಬರುವವರನ್ನು ಎದುರಿಸಿ, ಕೊಂದು ನಾಶಮಾಡುವ ಹಕ್ಕು ಅವರಿಗಿದೆ. ಯೆಹೂದ್ಯರಿಗೆ ತಮ್ಮನ್ನು ಹಗೆಮಾಡುವ ವೈರಿಗಳನ್ನು ಕೊಂದು ಅವರ ಆಸ್ತಿಪಾಸ್ತಿಗಳನ್ನು ಸೂರೆಮಾಡುವ ಹಕ್ಕಿದೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.
Kannada BSI Bible 2016
ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಪತ್ರಗಳಿಂದ ಅರಸನು - ಅಹಷ್ವೇರೋಷ್ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ ಹನ್ನೆರಡನೆಯ ತಿಂಗಳಾದ ಫಾಲ್ಗುನಮಾಸದ
Kannada Bible (KNCL) BSI 2016
ಆ ಪತ್ರಗಳಲ್ಲಿ ಅರಸನ ರಾಜಾಜ್ಞೆ ಹೀಗೆಂದು ಬರೆಯಲಾಗಿತ್ತು: ‘ಅರಸ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಂದೇ ದಿನದಲ್ಲಿ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.