Exodus 22:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 2
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೂರ್ಯೋದಯವಾದ ನಂತರ ಒಬ್ಬನು ಕಳ್ಳತನಮಾಡಿ ಸಿಕ್ಕಿಬಿದ್ದಾಗ, ಅವನನ್ನು ಹೊಡೆದು ಕೊಂದರೆ ಅದನ್ನು ನರಹತ್ಯೆಯೆಂದು ಎಣಿಸಬೇಕು. ಅವನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂತಿರುಗಿಸಬೇಕು. ಅವನಲ್ಲಿ ಕೊಡಲು ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ಗುಲಾಮನಾಗಿ ಮಾರಲ್ಪಡಬೇಕು.
Kannada BSI Bible 2016
ಅವನು ಕಳ್ಳತನ ಮಾಡುವಾಗ ಸೂರ್ಯೋದಯ ವಾದರೆ ಹೊಡೆದವನ ರಕ್ತ ಸುರಿಸಬೇಕು; ಕಳ್ಳನು ಸಿಕ್ಕಿದರೆ ಪೂರ್ಣವಾಗಿ ಬದಲು ಕೊಡಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನು ಮಾರಲ್ಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೂರ್ಯೋದಯವಾದನಂತರ ಒಬ್ಬನು ಕಳ್ಳನನ್ನು ಹೊಡೆದು ಕೊಂದರೆ ಅದು ನರಹತ್ಯವೇ ಸರಿ.) ಅವನು ಪೂರ್ತಿಯಾಗಿ ಸಲ್ಲಿಸಬೇಕು. ಅವನಲ್ಲಿ ಏನೂ ಇಲ್ಲದ ಪಕ್ಷಕ್ಕೆ ಅವನು ಆ ಕಳ್ಳತನ ಮಾಡಿದ್ದರಿಂದ ದಾಸನಾಗಿ ಮಾರಲ್ಪಡಬೇಕು.
Kannada Bible (KNCL) BSI 2016
ಸೂರ್ಯೋದಯವಾದ ನಂತರ ಒಬ್ಬನು ಕಳ್ಳನನ್ನು ಹೊಡೆದುಕೊಂದರೆ ಅದು ನರಹತ್ಯವೇ ಸರಿ. ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಕೊಡಬೇಕು. ಅವನಲ್ಲಿ ಕೊಡಲು ಏನೂ ಇಲ್ಲದಿದ್ದರೆ ಮಾಡಿದ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಕಳ್ಳತನ ಮಾಡುವಾಗ ಸೂರ್ಯೋದಯವಾದರೆ, ಹೊಡೆದವನ ರಕ್ತ ಸುರಿಸಬೇಕು. “ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂದಿರುಗಿಸಬೇಕು. ಅವನಲ್ಲಿ ಕೊಡಲು ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.