Ezekiel 14:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಘಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಖಡ್ಗ, ಕ್ಷಾಮ, ದುಷ್ಟಮೃಗ ಮತ್ತು ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಯೆರೂಸಲೇಮಿನ ಮೇಲೆ ಒಟ್ಟಿಗೆ ತಂದು, ಜನರನ್ನು, ಪಶುಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!
Kannada BSI Bible 2016
ದೇವರಾದ ಕರ್ತನು ಹೀಗೆ ಹೇಳುತ್ತಾನೆ; ನಾನು ಕತ್ತಿ ಬರಗಾಲ ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸ ಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವದು?
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಖಡ್ಗ ಕ್ಷಾಮ ದುಷ್ಟಮೃಗ ವ್ಯಾಧಿ ಎಂಬೀ ನಾಲ್ಕು ಬಾಧೆಗಳನ್ನು ಯೆರೂಸಲೇವಿುನ ಮೇಲೆ ಒಟ್ಟಿಗೆ ತಂದು ಜನಪಶುಗಳನ್ನು ನಿರ್ಮೂಲಮಾಡುವಾಗ ಹೇಳತಕ್ಕದ್ದೇನು!
Kannada Bible (KNCL) BSI 2016
ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?