Ezekiel 3:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಳ್ಳೆಯವನು ತನ್ನ ಒಳ್ಳೆಯತನವನ್ನು ತೊರೆದು ಕೆಟ್ಟದ್ದನ್ನು ಮಾಡಿದರೆ, ನಾನು ಅವನ ಹಾದಿಗೆ ತಡೆಯನ್ನು ಹಾಕಿ ಅವನು ಬೀಳುವಂತೆ ಮಾಡುವೆನು; ಅವನು ಸಾಯುವನು. ನೀನು ಅವನನ್ನು ಎಚ್ಚರಿಸಲಿಲ್ಲವಾದ್ದರಿಂದ ಅವನು ತನ್ನ ಪಾಪದ ನಿಮಿತ್ತ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೆ ಹೊಣೆಗಾರನನ್ನಾಗಿ ಮಾಡುತ್ತೇನೆ. ಜನರು ಅವನ ಒಳ್ಳೆಯ ಕಾರ್ಯಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯಮಾಡುವವನಾದರೆ, ಆಗ ನಾನು ಅವನ ಮುಂದೆ ಅಡಚಣೆಯನ್ನು ಒಡ್ಡುವೆನು, ಎಡವಿದರೆ ಅವನು ಸಾಯುವನು; ನೀನು ಅವನನ್ನು ಎಚ್ಚರಿಸದೆ ಹೋದಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಒಳ್ಳೆಕಾರ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಮರಣಕ್ಕೆ ನೀನು ಹೊಣೆಯಾಗುವೆ.
Kannada BSI Bible 2016
ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿ ನಾನು ಅವನ ಮುಂದೆ ಒಡ್ಡಿದ ಆಟಂಕವನ್ನು ಎಡವಿದರೆ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆ ಬಾರವು; ಅವನ ಮರಣಕ್ಕಾಗಿ ನಿನಗೇ ಮುಯ್ಯಿತೀರಿಸುವೆನು.
Kannada Bible (KNCL) BSI 2016
ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡತಡೆಯನ್ನು ಇಡುವೆನು, ಅವನು ಸಾಯುವನು. ನೀನು ಅವನನ್ನು ಎಚ್ಚರಿಸದೆ ಇದ್ದುದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು. ಅವನು ಮಾಡಿರುವ ಸುಕೃತ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಸಾವಿಗೆ ನೀನೇ ಹೊಣೆಯಾಗುವೆ.