Galatians 3:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
Kannada BSI Bible 2016
ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ
Kannada Bible (KNCL) BSI 2016
ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.