Galatians 3:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಎಲ್ಲಾ ಜನರಿಗೆ ದೇವರ ಆಶೀರ್ವಾದವು ದೊರೆಯಲೆಂದು ಕ್ರಿಸ್ತನು ಹೀಗೆ ಮಾಡಿದನು. ಈ ಆಶೀರ್ವಾದವನ್ನು ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದನು. ಈ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಬರುತ್ತದೆ. ದೇವರು ವಾಗ್ದಾನ ಮಾಡಿದ ಪವಿತ್ರಾತ್ಮನನ್ನು ನಾವು ಹೊಂದಿಕೊಳ್ಳಲೆಂದು ಯೇಸು ಮರಣಹೊಂದಿದನು. ನಂಬಿಕೆಯಿಡುವುದರ ಮೂಲಕ ನಾವು ಈ ವಾಗ್ದಾನವನ್ನು ಪಡೆದುಕೊಳ್ಳುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.
Kannada BSI Bible 2016
ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಯೇಸು ಕ್ರಿಸ್ತನ ಮೂಲಕ ಆನ್ಯಜನರಿಗೆ ಉಂಟಾಗು ವಂತೆ ದೇವರು ವಾಗ್ದಾನ ಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನು ನಮ್ಮ ನಿವಿುತ್ತ ಶಾಪವಾಗಿ ಧರ್ಮಶಾಸ್ತ್ರದಲ್ಲಿ ಹೇಳಿರುವ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ.
Kannada Bible (KNCL) BSI 2016
ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.