Galatians 3:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಯೆಹೂದ್ಯರಲ್ಲದವರನ್ನು ಅವರ ನಂಬಿಕೆಯ ಮೂಲಕ ನೀತಿವಂತರನ್ನಾಗಿ ಮಾಡುತ್ತಾನೆ. “ಅಬ್ರಹಾಮನೇ, ನಿನ್ನ ಮೂಲಕ ದೇವರು ಭೂಮಿಯ ಮೇಲಿರುವ ಜನರನ್ನೆಲ್ಲ ಆಶೀರ್ವದಿಸುತ್ತಾನೆ” ಎಂಬ ಸುವಾರ್ತೆಯನ್ನು ಅವನಿಗೆ ಮೊದಲೇ ತಿಳಿಸಲಾಯಿತೆಂದು ಪವಿತ್ರ ಗ್ರಂಥವು ಹೇಳುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.
Kannada BSI Bible 2016
ದೇವರು ಅನ್ಯಜನರನ್ನು ನಂಬಿಕೆಯ ಮೂಲಕ ವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬ ದಾಗಿ ಬರಹವು ಮೊದಲೇ ಕಂಡು ಅಬ್ರಹಾಮ ನಿಗೆ--ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಸುವಾರ್ತೆಯನ್ನು ಮುಂಚಿತವಾಗಿಯೇ ಸಾರಿತು ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಅನ್ಯಜನರನ್ನು ನಂಬಿಕೆಯ ನಿವಿುತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬದಾಗಿ ಶಾಸ್ತ್ರವು ಮೊದಲೇ ಕಂಡು ಅಬ್ರಹಾಮನಿಗೆ - ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವದೆಂಬ ಶುಭವರ್ತಮಾನವನ್ನು ಮುಂಚಿತವಾಗಿಯೇ ತಿಳಿಸಿತು.
Kannada Bible (KNCL) BSI 2016
ಈ ವಿಶ್ವಾಸದ ಮೂಲಕವೇ ಅನ್ಯಧರ್ಮೀಯರನ್ನು ಕೂಡ ದೇವರು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ, ಎಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆಯಲಾಗಿತ್ತು. ಈ ಕಾರಣದಿಂದಲೇ ಅಬ್ರಹಾಮನಿಗೆ, “ನಿನ್ನ ಮುಖಾಂತರವೇ ಎಲ್ಲಾ ಜನಾಂಗಗಳು ಆಶೀರ್ವಾದವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಮುಂಚಿತವಾಗಿ ತಿಳಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.