Hebrews 11:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.
Kannada BSI Bible 2016
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ತಾನು ನೀತಿವಂತನೆಂದು ಸಾಕ್ಷಿಹೊಂದಿದನು; ದೇವರು ಅವನ ಕಾಣಿಕೆಗಳನ್ನು ಅಂಗೀಕಾರಮಾಡಿದ್ದೇ ಆ ಸಾಕ್ಷಿ. ಅವನು ಸತ್ತಿದ್ದರೂ ಅವನ ನಂಬಿಕೆಯ ಮೂಲಕ ಇನ್ನೂ ಮಾತಾಡುತ್ತಾನೆ.
Kannada Bible (KNCL) BSI 2016
ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.