Hebrews 7:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆತನು ಬೇರೆ ಯಾಜಕರಂತಲ್ಲ. ಅವರಾದರೋ ಪ್ರತಿ ದಿನವೂ ಯಜ್ಞಗಳನ್ನು ಅರ್ಪಿಸಬೇಕು. ಅವರು ತಮ್ಮ ಸ್ವಂತ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಿದ ನಂತರ ಬೇರೆಯವರ ಪಾಪಗಳಿಗಾಗಿ ಅರ್ಪಿಸಬೇಕು. ಆದರೆ ಕ್ರಿಸ್ತನು ಹಾಗೆ ಮಾಡಬೇಕಾಗಿಲ್ಲ. ಆತನು ತನ್ನನ್ನೇ ಯಜ್ಞವಾಗಿ ಅರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
Kannada BSI Bible 2016
ಮೊದಲು ತನ್ನ ಸ್ವಂತ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪ ಪರಿಹಾರಕ್ಕಾಗಿ ಯಜ್ಞಾರ್ಪಣೆ ಮಾಡುವ ಮಹಾ ಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸ ಬೇಕಾದ ಅವಶ್ಯವಿಲ್ಲ. ಯಾಕಂದರೆ ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.ನ್ಯಾಯಪ್ರಮಾಣವು ನಿರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ಮಾಡುತ್ತದೆ; ಆದರೆ ನ್ಯಾಯಪ್ರಮಾಣದ ತರುವಾಯ ಆಣೆಯೊಡನೆ ಉಂಟಾದ ವಾಕ್ಯವು ಸದಾಕಾಲಕ್ಕೂ ಪ್ರತಿಷ್ಠೆ ಮಾಡಿಕೊಂಡ ಮಗನನ್ನೇ ಮಹಾಯಾಜಕ ನನ್ನಾಗಿ ಮಾಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆಮೇಲೆ ಜನರ ಪಾಪಪರಿಹಾರಕ್ಕಾಗಿ ಸಮರ್ಪಣೆಮಾಡುವ ಲೇವಿಕ ಮಹಾಯಾಜಕರಂತೆ ಈತನು ಪ್ರತಿನಿತ್ಯವೂ ಸಮರ್ಪಿಸಬೇಕಾದ ಅವಶ್ಯವಿಲ್ಲ. ಈತನು ತನ್ನನ್ನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
Kannada Bible (KNCL) BSI 2016
ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.