Hebrews 9:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರಿಂದ ಕರೆಯಲ್ಪಟ್ಟ ಜನರು ದೇವರ ವಾಗ್ದಾನಗಳನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಯನ್ನು ದೇವರಿಂದ ತಂದನು. ದೇವರ ಜನರು ಅವುಗಳನ್ನು ಶಾಶ್ವತವಾಗಿ ಹೊಂದಿಕೊಳ್ಳಲು ಸಾಧ್ಯ. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಜನರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಿಂದ ಕರೆಯಲ್ಪಟ್ಟ ಜನರು, ದೇವರ ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಹೊಂದಿಕೊಳ್ಳಲೆಂದು ಕ್ರಿಸ್ತನು ಈ ಹೊಸ ಒಡಂಬಡಿಕೆಗೆ ಮಧ್ಯಸ್ಥನಾದನು. ಏಕೆಂದರೆ ಮೊದಲನೆ ಒಡಂಬಡಿಕೆಯ ಕಾಲದಲ್ಲಿ ಮಾಡಿದ ಪಾಪಗಳಿಂದ ಅವರನ್ನು ಬಿಡುಗಡೆಗೊಳಿಸುವುದಕ್ಕಾಗಿ ಕ್ರಿಸ್ತನು ಮರಣ ಹೊಂದಿದನು.
Kannada BSI Bible 2016
ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಈ ಕಾರಣದಿಂದ ಆತನು ಒಂದು ಹೊಸ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ. ಮೊದಲನೆಯ ಒಡಂಬಡಿಕೆಯ ಕಾಲದಲ್ಲಿ ನಡೆದ ಅಕ್ರಮಗಳ ಪರಿಹಾರಕ್ಕಾಗಿ ಆತನು ಮರಣವನ್ನು ಅನುಭವಿಸಿದ್ದರಿಂದ ದೇವರಿಂದ ಕರೆಯಿಸಿಕೊಂಡವರು ವಾಗ್ದಾನವಾಗಿದ್ದ ನಿತ್ಯಬಾಧ್ಯತೆಯನ್ನು ಹೊಂದುವದಕ್ಕೆ ಆತನ ಮೂಲಕ ಮಾರ್ಗವಾಯಿತು.
Kannada Bible (KNCL) BSI 2016
ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.