Hebrews 9:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತನು ಅನೇಕ ಸಲ ತನ್ನನ್ನು ಅರ್ಪಿಸಿಕೊಂಡಿದ್ದರೆ, ಈ ಲೋಕವು ಸೃಷ್ಟಿಯಾದಂದಿನಿಂದ ಆತನು ಅನೇಕ ಸಲ ಸಂಕಟವನ್ನು ಅನಭವಿಸ ಬೇಕಾಗುತ್ತಿತ್ತು. ಆದರೆ ಕ್ರಿಸ್ತನು ಯುಗಾಂತ್ಯದಲ್ಲಿ ಪಾಪನಿವಾರಣೆ ಮಾಡುವುದಕ್ಕಾಗಿ ಬಂದು ಒಂದೇ ಸಲ ತನ್ನನ್ನು ಅರ್ಪಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.
Kannada BSI Bible 2016
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಟ್ಟು ಸಾಯಬೇಕಾಗಿತ್ತು. ಆದರೆ ಒಂದೇ ಸಾರಿ ಯುಗಗಳ ಸಮಾಪ್ತಿಯಲ್ಲೇ ಆತನು ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ತನ್ನನ್ನು ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.
Kannada Bible (KNCL) BSI 2016
ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.