Isaiah 41:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಪ್ರಶ್ನೆಗಳಿಗೆ ಉತ್ತರಿಸಿರಿ: ಪೂರ್ವದಿಕ್ಕಿನಿಂದ ಬರುವ ಮನುಷ್ಯನನ್ನು ಎಚ್ಚರಿಸಿದವರು ಯಾರು? ಅವನು ಒಳ್ಳೆಯತನವನ್ನು ತನ್ನೊಂದಿಗಿರಲು ಕೇಳುತ್ತಾನೆ. ತನ್ನ ಖಡ್ಗವನ್ನು ಉಪಯೋಗಿಸಿ ಜನಾಂಗಗಳನ್ನು ಸೋಲಿಸುವನು. ಅವರನ್ನು ಧೂಳಿನಂತೆ ಮಾಡುವನು. ತನ್ನ ಬಿಲ್ಲನ್ನು ಉಪಯೋಗಿಸಿ ರಾಜರನ್ನು ವಶಪಡಿಸಿಕೊಳ್ಳುತ್ತಾನೆ. ಅವರು ಗಾಳಿಯಲ್ಲಿ ತೂರಾಡುವ ಹುಲ್ಲಿನಂತೆ ಓಡಿಹೋಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.
Kannada BSI Bible 2016
ಮೂಡಣದಿಂದ ನೀತಿವಂತ ನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ಮುಂದೆ ಕೊಟ್ಟುಬಿಟ್ಟು ಅವ ನನ್ನು ರಾಜರ ಮೇಲೆ ಆಳುವದಕ್ಕೆ ಮಾಡಿದವನು ಯಾರು? ಅವನ ಕತ್ತಿಗೆ ದೂಳನ್ನಾಗಿಯೂ ಅವನ ಬಿಲ್ಲಿಗೆ ಹಾರಿ ಹೋಗುವ ಹೊಟ್ಟಿನಂತೆಯೂ ಅವ ರನ್ನು ಕೊಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂಡಲಲ್ಲಿ ಒಬ್ಬನನ್ನು ಎಬ್ಬಿಸಿ ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು ಅವನನ್ನು ರಾಜರ ಮೇಲೆ ಆಳಗೊಡಿಸಿ ಅವರ ಕತ್ತಿಯನ್ನು ದೂಳನ್ನಾಗಿಯೂ ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಒಣಹುಲ್ಲನ್ನಾಗಿಯೂ ಮಾಡಿ
Kannada Bible (KNCL) BSI 2016
ಕರೆತಂದವರಾರು ಆ ಪರಾಕ್ರಮಿಯನ್ನು ಪೂರ್ವದಿಂದ? ಅವನು ಗೆದ್ದುಬರುವಂತೆ ಮಾಡಿದವರಾರು ದಿಗ್ವಿಜಯದಿಂದ? ರಾಷ್ಟ್ರಗಳನ್ನು, ರಾಜರುಗಳನ್ನು ಸೋಲಿಸಿದವರಾರು ಅವನ ಕೈಯಿಂದ? ಧೂಳು ಧೂಳಾಗಿಸುತ್ತಾನೆ ಅವರನ್ನು ಅವನ ಖಡ್ಗದಿಂದ ಗಾಳಿಗೆ ತೂರಿಹೋಗುವ ಹುಲ್ಲನ್ನಾಗಿಸುತ್ತಾನೆ ಅವನ ಬಿಲ್ಲಿನಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೂರ್ವದಿಂದ ನೀತಿವಂತನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು, ರಾಷ್ಟ್ರಗಳನ್ನು ಅವನ ಮುಂದೆ ಕೊಟ್ಟುಬಿಟ್ಟು, ಅವನನ್ನು ರಾಜರ ಮೇಲೆ ಆಳುವುದಕ್ಕೆ ಮಾಡಿದವನು ಯಾರು? ಅವನ ಖಡ್ಗವನ್ನು ಧೂಳನ್ನಾಗಿಯೂ, ಅವನ ಬಿಲ್ಲನ್ನು ಹಾರಿಹೋಗುವ ಹೊಟ್ಟಿನಂತೆಯೂ ಅವರನ್ನು ಕೊಟ್ಟನು.