Isaiah 48:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ತನ್ನ ಜನರನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದನು. ಜನರು ಬಾಯಾರಲಿಲ್ಲ; ಯಾಕೆಂದರೆ ಆತನು ಬಂಡೆಯಿಂದ ನೀರು ಹರಿಯುಂತೆ ಮಾಡಿದನು. ಆತನು ಬಂಡೆಯನ್ನು ಇಬ್ಭಾಗ ಮಾಡಿದಾಗ ನೀರು ಅದರೊಳಗಿಂದ ಹರಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.
Kannada BSI Bible 2016
ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ನೀರು ರಭಸದಿಂದ ಹೊರಗೆ ಬಂತು;ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಅವರನ್ನು ಮರುಭೂವಿುಯಲ್ಲಿ ನಡಿಸಿದಾಗ ಅವರು ದಾಹಗೊಳ್ಳಲಿಲ್ಲ; ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು.
Kannada Bible (KNCL) BSI 2016
ಆತ ಮರುಭೂಮಿಯಲ್ಲಿ ತನ್ನ ಜನರನ್ನು ನಡೆಸಿದಾಗ ಬಳಲಲಿಲ್ಲ ಅವರು ಬಾಯಾರಿಕೆಯಿಂದ; ಹರಿಸಿದನು ನೀರನ್ನು ಅವರಿಗಾಗಿ ಕಲ್ಲಿನೊಳಗಿಂದ ಜಲವಾಹಿನಿ ಹರಿಯಿತು ಆತ ಸೀಳಿದ ಬಂಡೆಯಿಂದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು.