Jeremiah 14:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನ್ನು ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಕೇವಲ ಪಾತ್ರೆಗಳನ್ನು ತೆಗೆದುಕೊಂಡು ಹಿಂದಿರುಗಿ ಬರುತ್ತಾರೆ. ಅವರು ನಾಚಿಕೆಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.
Kannada BSI Bible 2016
ಕರ್ತನು--ನಾನು ಅವರಿಗೆ ವಿರೋಧವಾಗಿ ನಾಲ್ಕು ತರವಾದವುಗಳನ್ನು ಅಂದರೆ ಕೊಲ್ಲುವದಕ್ಕೆ ಕತ್ತಿಯನ್ನೂ ಹರಿಯುವದಕ್ಕೆ ನಾಯಿಗಳನ್ನೂ ತಿನ್ನುವದಕ್ಕೂ ನಾಶ ಮಾಡುವದಕ್ಕೂ ಆಕಾಶದ ಪಕ್ಷಿಗಳನ್ನೂ ಭೂಮಿಯ ಮೃಗಗಳನ್ನೂ ನೇಮಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರಿಗೆ ಕಳುಹಿಸುತ್ತಾರೆ; ಅವರು ಕೊಳಗಳಿಗೆ ಹೋದಾಗ ನೀರು ಕಾಣುವದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ; ಆಶೆಗೆಟ್ಟು ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.
Kannada Bible (KNCL) BSI 2016
ಅವರಲ್ಲಿನ ಶ್ರೀಮಂತರು ತಮ್ಮ ಊಳಿಗದವರನ್ನು ನೀರಿಗೆ ಕಳಿಸುತ್ತಾರೆ. ಅವರೋ ಕೊಳಗಳಲ್ಲಿ ನೀರು ಕಾಣದೆ ಬರೀ ಬಿಂದಿಗೆಗಳೊಂದಿಗೆ ಹಿಂದಿರುಗುತ್ತಾರೆ. ನಿರಾಶೆಗೊಂಡು, ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.