Jeremiah 21:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನ ಮನೆತನದವರೇ, ಯೆಹೋವನು ಹೀಗೆ ಹೇಳುತ್ತಾನೆ: ನೀವು ಪ್ರತಿದಿನ ನಿಷ್ಪಕ್ಷಪಾತವಾಗಿ ನ್ಯಾಯನಿರ್ಣಯ ಮಾಡಬೇಕು. ಅಪರಾಊಗಳಿಂದ ಕಷ್ಟಕ್ಕೊಳಗಾದವರನ್ನು ರಕ್ಷಿಸಙೇಕು. ನೀವು ಹಾಗೆ ಮಾಡದಿದ್ದರೆ ನನಗೆ ಘಹಳ ಕೋಪ ಬರುತ್ತದೆ. ನನ್ನ ಕೋಪವು ಯಾರಿಂದಲೂ ನಂದಿಸಲಾಗದ ಬೆಂಕಿಯಂತಿದೆ. ನೀವು ದುಷ್ಕೃತ್ಯಗಳನ್ನು ಮಾಡಿದ್ದರಿಂದ ಹೀಗಾಗುತ್ತದೆ.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.
Kannada BSI Bible 2016
ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದ ಲ್ಲಿಯೇ ಸಾಯುವನು; ಈ ದೇಶವನ್ನು ಇನ್ನು ನೋಡು ವದೇ ಇಲ್ಲ;
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ - ನಿಮ್ಮ ದುಷ್ಕೃತ್ಯಗಳ ನಿವಿುತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ ಮುಂಜಾನೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ.
Kannada Bible (KNCL) BSI 2016
‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ, “ ‘ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.