Jeremiah 23:16 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತಿಐಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಘಂದವುಗಳೇ ಹೊರತು ನನ್ನಿದ ಘಂದವುಗಳಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ - ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮ್ಮಲ್ಲಿ ವ್ಯರ್ಥನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಹೃದಯಕ್ಕೆ ಹೊಳೆದದ್ದನ್ನೇ ಹೇಳುತ್ತಾರೆ.
Kannada Bible (KNCL) BSI 2016
ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.