Jeremiah 26:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಘದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.
Kannada BSI Bible 2016
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯಯನನ್ನೂ ಯೆಹೂದದ ಮತ್ತು ಯೆರೂಸ ಲೇಮಿನ ಶ್ರೇಷ್ಠರೆಲ್ಲರನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ [ಇವನನ್ನು ಕೊಂದುಹಾಕಿ] ನಮಗೆ ದೊಡ್ಡ ಕೇಡನ್ನು ಉಂಟುಮಾಡಿಕೊಳ್ಳುವವರಾಗಿದ್ದೇವೆ ಎಂಬದಾಗಿ ಸಕಲಜನ ಸಮೂಹಕ್ಕೆ ಹೇಳಿದರು.
Kannada Bible (KNCL) BSI 2016
ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.