John 9:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಹೆದರಿಕೊಂಡಿದ್ದರಿಂದ ಹಾಗೆ ಹೇಳಿದರು. ಯೇಸುವನ್ನು ಕ್ರಿಸ್ತನೆಂದು ಹೇಳುವ ಯಾರನ್ನೇ ಆಗಲಿ ಸಭಾಮಂದಿರದಿಂದ ಬಹಿಷ್ಕರಿಸುವುದಾಗಿ ಯೆಹೂದ್ಯನಾಯಕರುಗಳು ಪ್ರಕಟಿಸಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.
Kannada BSI Bible 2016
ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ತಂದೆತಾಯಿಗಳು ಯೆಹೂದ್ಯರಿಗೆ ಅಂಜಿದ ಕಾರಣ ಈ ಪ್ರಕಾರ ಹೇಳಿದರು. ಯಾಕಂದರೆ - ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡು ಹೇಳಿದರೆ ಅಂಥವನಿಗೆ ಬಹಿಷ್ಕಾರಹಾಕಬೇಕೆಂದು ಯೆಹೂದ್ಯರು ಅದಕ್ಕೆ ಮುಂಚೆ ಗೊತ್ತುಮಾಡಿಕೊಂಡಿದ್ದರು.
Kannada Bible (KNCL) BSI 2016
ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು.