Jonah 4:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋನನು ಯೆಹೋವನಿಗೆ ದೂರು ಹೇಳುತ್ತಾ, “ಇದು ಹೀಗಾಗುತ್ತದೆಯೆಂದು ನನಗೆ ಗೊತ್ತಿತ್ತು. ನಾನು ನನ್ನ ದೇಶದಲ್ಲಿದ್ದೆ. ಇಲ್ಲಿಗೆ ಬರಲು ನನಗೆ ಹೇಳಿದವನು ನೀನೇ. ಈ ದುಷ್ಟಪಟ್ಟಣದ ಜನರನ್ನು ನೀನು ಕ್ಷಮಿಸುತ್ತೀ ಎಂದು ನನಗೆ ಆಗಲೇ ಗೊತ್ತಿತ್ತು. ಆದ್ದರಿಂದ ನಾನು ತಾರ್ಷೀಷಿಗೆ ಓಡಿಹೋಗಲು ನಿರ್ಧರಿಸಿದೆನು. ನೀನು ದಯಾಪರನಾದ, ಕೃಪಾಪೂರ್ಣನಾದ, ಕೋಪಗೊಳ್ಳುವುದರಲ್ಲಿ ನಿಧಾನವಾದ ಮತ್ತು ಮಹಾಕನಿಕರವುಳ್ಳ ದೇವರೆಂದು ನನಗೆ ಗೊತ್ತಿತ್ತು. ಆ ಜನರು ಪಾಪ ಮಾಡುವದನ್ನು ನಿಲ್ಲಿಸಿದರೆ, ನೀನು ನಿನ್ನ ಯೋಜನೆಯಂತೆ ಅವರನ್ನು ನಾಶಮಾಡುವುದಿಲ್ಲ ಎಂದು ನನಗೆ ಗೊತ್ತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.
Kannada BSI Bible 2016
ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.
Kannada Bible (KNCL) BSI 2016
ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.