Jude 1:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವದೂತರು ಅಧಿಕಾರವನ್ನು ಹೊಂದಿದ್ದರೂ ಅದನ್ನು ಉಳಿಸಿಕೊಳ್ಳಲಾರದೆ ಸ್ವಂತ ವಾಸಸ್ಥಾನವನ್ನು ಬಿಟ್ಟುಹೋದದ್ದನ್ನು ನೆನಸಿಕೊಳ್ಳಿರಿ. ಆದ್ದರಿಂದ ಪ್ರಭುವು ಈ ದೇವದೂತರನ್ನು ಅಂಧಕಾರದಲ್ಲಿಟ್ಟನು. ಅವರನ್ನು ಶಾಶ್ವತವಾದ ಬೇಡಿಗಳಿಂದ ಬಂಧಿಸಲಾಯಿತು. ಮಹಾದಿನದಂದು ಅವರಿಗೆ ತೀರ್ಪು ನೀಡುವುದಕ್ಕಾಗಿ ಆತನು ಅವರನ್ನು ಅಲ್ಲಿಟ್ಟಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡಿಕೊಳ್ಳದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದಲ್ಲಿ ಆಗುವ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿರಿಸಿದ್ದಾನೆ.
Kannada BSI Bible 2016
ತಮ್ಮ ಮೊದಲಿನ ಸ್ಥಿತಿಯನ್ನು ಕಾಪಾಡದೆ ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೂತರಿಗೆ ಆತನು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದ ತೀರ್ಪಿಗಾಗಿ ಅವರನ್ನು ಕತ್ತಲೆ ಯೊಳಗೆ ಕಾದಿಟ್ಟಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ.
Kannada Bible (KNCL) BSI 2016
ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.