Leviticus 10:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆರೋನನಿಗೆ ಇನ್ನೂ ಜೀವಂತವಾಗಿದ್ದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಇಬ್ಬರು ಪುತ್ರರು ಇದ್ದರು. ಮೋಶೆಯು ಆರೋನನಿಗೆ ಮತ್ತು ಅವನ ಇಬ್ಬರು ಗಂಡುಮಕ್ಕಳಿಗೆ, “ಯಜ್ಞವೇದಿಕೆಯ ಮೇಲೆ ಅರ್ಪಿಸಿದ ಯಜ್ಞಗಳಲ್ಲಿಯೂ ಧಾನ್ಯನೈವೇದ್ಯದಲ್ಲಿಯೂ ಉಳಿದ ಭಾಗವನ್ನು ತೆಗೆದುಕೊಂಡು ನೀವು ತಿನ್ನಬೇಕು. ಆದರೆ ನೀವು ಅದಕ್ಕೆ ಹುಳಿಯನ್ನು ಸೇರಿಸದೆ ಯಜ್ಞವೇದಿಕೆಯ ಸಮೀಪದಲ್ಲಿಯೇ ತಿನ್ನಬೇಕು. ಯಾಕೆಂದರೆ ಆ ಸಮರ್ಪಣೆಯು ಬಹಳ ಪವಿತ್ರವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.
Kannada BSI Bible 2016
ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರಿಗೂ - ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ವಿುಕ್ಕಿರುವ ನೈವೇದ್ಯದ್ರವ್ಯವನ್ನು ತೆಗೆದುಕೊಂಡು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು.
Kannada Bible (KNCL) BSI 2016
ಮೋಶೆ ಆರೋನನಿಗೂ ಅವನ ಉಳಿದ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಅವರಿಗೆ ಹೀಗೆಂದು ಹೇಳಿದನು: “ಸರ್ವೇಶ್ವರನಿಗೆ ದಹನ ಬಲಿದಾನವಾಗಿ ಸಮರ್ಪಿತವಾದ ದ್ರವ್ಯಗಳಲ್ಲಿ ಮಿಕ್ಕಿರುವ ನೈವೇದ್ಯ ದ್ರವ್ಯವನ್ನು ತೆಗೆದುಕೊಂಡು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ ಬಲಿಪೀಠದ ಬಳಿಯಲ್ಲಿ ಊಟಮಾಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋಶೆಯು ಆರೋನನೊಂದಿಗೂ ಉಳಿದ ಅವನ ಪುತ್ರರಾದ ಎಲಿಯಾಜರನೊಂದಿಗೂ ಈತಾಮಾರನೊಂದಿಗೂ ಮಾತನಾಡಿ, “ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಗಳಲ್ಲಿ ಉಳಿದಿರುವ ಧಾನ್ಯ ಸಮರ್ಪಣೆಯನ್ನು ತೆಗೆದುಕೊಳ್ಳಿರಿ ಮತ್ತು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿಯಿಲ್ಲದ ರೊಟ್ಟಿ ತಿನ್ನಿರಿ. ಏಕೆಂದರೆ ಅದು ಮಹಾಪರಿಶುದ್ಧವಾದದ್ದು.