Leviticus 5:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅವನು ಶಕ್ತನಾಗಿಲ್ಲದಿದ್ದರೆ, ಆಗ ಅವನು ಎಂಟು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ತರಬೇಕು. ಇದು ಅವನ ಪಾಪಪರಿಹಾರಕ ಯಜ್ಞವಾಗಿರುವುದು. ಅವನು ಹಿಟ್ಟಿಗೆ ಎಣ್ಣೆಯನ್ನು ಹಾಕಬಾರದು. ಅವನು ಅದರ ಮೇಲೆ ಸುಗಂಧ ಧೂಪವನ್ನು ಇಡಬಾರದು, ಯಾಕೆಂದರೆ ಅದು ಪಾಪಪರಿಹಾರಕ ಯಜ್ಞವಾಗಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.
Kannada BSI Bible 2016
ಆದರೆ ಅವನು ಎರಡು ಬೆಳವಗಳನ್ನಾಗಲಿ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ತರುವದಕ್ಕೆ ಅಶಕ್ತನಾಗಿದ್ದರೆ ಪಾಪಮಾಡಿದವನು ತನ್ನ ಸಮರ್ಪಣೆ ಗಾಗಿ ಒಂದು ಎಫದ ಹತ್ತನೆಯ ಭಾಗದಷ್ಟು ನಯ ವಾದ ಹಿಟ್ಟನ್ನು ಪಾಪದ ಬಲಿಗಾಗಿ ತರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಅದು ಪಾಪದ ಬಲಿಯಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವದಕ್ಕೂ ಗತಿಯಿಲ್ಲದೆ ಹೋದರೆ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಕೂಡದು, ಧೂಪವನ್ನು ಇಡಕೂಡದು.
Kannada Bible (KNCL) BSI 2016
“ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿ ಪಾರಿವಾಳಗಳನ್ನಾಗಲಿ ಕೊಡಲು ಅವನಿಂದ ಆಗದೆ ಹೋದಲ್ಲಿ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿ ಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆ ಹೊಯ್ಯಕೂಡದು, ಸಾಂಬ್ರಾಣಿಯನ್ನು ಇಡಕೂಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.