Luke 12:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನರಿಗೆ, “ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ” ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
Kannada BSI Bible 2016
ಇದಲ್ಲದೆ ಆತನು ಅವರಿಗೆ--ಜಾಗ್ರತೆ ಯಾಗಿದ್ದು ಲೋಭಕ್ಕೆ ಎಚ್ಚರಿಕೆಯಾಗಿರ್ರಿ; ಯಾಕಂದರೆ ಒಬ್ಬ ಮನುಷ್ಯನಿಗೆ ಸಮೃದ್ಧಿಯಾದ ಆಸ್ತಿಯು ಅವನಿಗೆ ಜೀವಾಧಾರವಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನರಿಗೆ - ಎಲ್ಲಾ ಲೋಭಕ್ಕೂ ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವದಿಲ್ಲ ಎಂದು ಹೇಳಿ ಒಂದು ಸಾಮ್ಯವನ್ನು ಹೇಳಿದನು;
Kannada Bible (KNCL) BSI 2016
ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.