Luke 16:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸ್ವಲ್ಪ ಸಮಯದ ನಂತರ ಲಾಜರನು ಸತ್ತನು. ದೇವದೂತರು ಲಾಜರನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಒಂದು ದಿನ ಐಶ್ವರ್ಯವಂತನೂ ಸತ್ತನು. ಅವನಿಗೆ ಸಮಾಧಿ ಮಾಡಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವಲ್ಲಿ ಸ್ವಲ್ಪ ಕಾಲವಾದ ಮೇಲೆ ಆ ಭಿಕ್ಷುಕನು ಸತ್ತನು. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು. ಅವನನ್ನು ಹೂಣಿಟ್ಟರು.
Kannada BSI Bible 2016
ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ ಸ್ವಲ್ಪ ಕಾಲದ ಮೇಲೆ ಆ ಭಿಕ್ಷಗಾರನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡುಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರಕ್ರಿಯೆಗಳು ಆದವು.
Kannada Bible (KNCL) BSI 2016
“ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಂದು ದಿನ ಆ ಭಿಕ್ಷುಕನು ಸತ್ತುಹೋದನು. ದೇವದೂತರು ಅವನನ್ನು ಅಬ್ರಹಾಮನ ಬಳಿಗೆ ತೆಗೆದುಕೊಂಡು ಹೋದರು. ಧನವಂತನು ಸಹ ಸತ್ತುಹೋದನು. ಅವನಿಗೆ ಶವಸಂಸ್ಕಾರವಾಯಿತು.