Luke 20:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಬಂದು ಆ ರೈತರನ್ನು ಕೊಲ್ಲುವನು! ಬಳಿಕ ಅವನು ಆ ತೋಟವನ್ನು ಬೇರೆ ಕೆಲವು ರೈತರಿಗೆ ಕೊಡುವನು.” ಜನರು ಈ ಸಾಮ್ಯವನ್ನು ಕೇಳಿ, “ಇಲ್ಲ! ಹಾಗೆಂದಿಗೂ ಆಗಬಾರದು!” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.
Kannada BSI Bible 2016
ಅವನು ಬಂದು ಈ ಒಕ್ಕಲಿಗರನ್ನು ಸಂಹರಿಸಿ ದ್ರಾಕ್ಷೇತೋಟ ವನ್ನು ಬೇರೆಯವರಿಗೆ ಕೊಡುವನು ಅಂದನು. ಅವರು ಇದನ್ನು ಕೇಳಿ--ಹಾಗೆ ಎಂದಿಗೂ ಆಗಬಾರದು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವದಕ್ಕೆ ಕೊಡುವನು ಅಂದನು.
Kannada Bible (KNCL) BSI 2016
“ಹೀಗಿರುವಲ್ಲಿ, ತೋಟದ ಯಜಮಾನ ಇವರಿಗೆ ಏನು ಮಾಡುತ್ತಾನೆ?” ಎಂದು ಕೇಳಿದ ಯೇಸು, ತಾವೇ ಉತ್ತರಿಸುತ್ತಾ, “ಅವನು ಬಂದು ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುತ್ತಾನೆ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು.