Malachi 3:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Kannada BSI Bible 2016
ನ್ಯಾಯಕ್ಕೋಸ್ಕರ ನಿಮ್ಮನ್ನು ನಾನು ಸವಿಾಪಿ ಸುತ್ತೇನೆ; ಆಗ ಕಣಿಹೇಳುವವರಿಗೂ ವ್ಯಭಿಚಾರಿ ಗಳಿಗೂ ಸುಳ್ಳು ಪ್ರಮಾಣಮಾಡುವವರಿಗೂ ಸಂಬಳ ದಲ್ಲಿ ಕೂಲಿಯವನಿಗೂ ವಿಧವೆಗೂ ದಿಕ್ಕಿಲ್ಲದವನಿಗೂ ಬಲಾತ್ಕಾರ ಮಾಡುವವರಿಗೂ ಅನ್ಯನ ನ್ಯಾಯವನ್ನು ತಿರಿಗಿಸಿ ಬಿಡುವವರಿಗೂ ನನಗೆ ಭಯಪಡದವರಿಗೂ ವಿರೋಧವಾಗಿ ಶೀಘ್ರವಾದ ಸಾಕ್ಷಿಗಾರನಾಗಿರು ವೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.
Kannada Bible (KNCL) BSI 2016
“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.