Malachi 4:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.
Kannada BSI Bible 2016
ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಆ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ ದುಷ್ಕರ್ಮಿಗಳೂ ಹೊಟ್ಟಿನಂತಿರುವರು; ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಲಯವಾಗುವದು; ಬುಡ ರೆಂಬೆಗಳಾವದನ್ನೂ ಉಳಿಸದು.
Kannada Bible (KNCL) BSI 2016
“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.