Numbers 21:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿಮ್ಮ ದೇಶವನ್ನು ಹಾದುಹೋಗುವುದಕ್ಕೆ ನಮಗೆ ಅಪ್ಪಣೆಕೊಡು. ನಿಮ್ಮ ಹೊಲಗಳಿಗಾಗಲಿ ದ್ರಾಕ್ಷಿತೋಟಗಳಿಗಾಗಲಿ ನಾವು ತಿರುಗಿಕೊಳ್ಳುವುದಿಲ್ಲ. ನಿನ್ನ ಯಾವ ಬಾವಿಗಳಿಂದಲೂ ನಾವು ನೀರು ಕುಡಿಯುವುದಿಲ್ಲ. ನಾವು ನಿಮ್ಮ ದೇಶವನ್ನು ದಾಟಿಹೋಗುವ ತನಕ ರಾಜ ಮಾರ್ಗದಲ್ಲಿಯೇ ಪ್ರಯಾಣ ಮಾಡುತ್ತೇವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.
Kannada BSI Bible 2016
ನಾವು ನಿನ್ನ ದೇಶದಲ್ಲಿ ದಾಟಿ ಹೋಗಬೇಕು; ನಾವು ಹೊಲದಲ್ಲಾದರೂ ದ್ರಾಕ್ಷೇ ತೋಟದಲ್ಲಾದರೂ ತಿರುಗಿ ಕೊಳ್ಳದೆ ಬಾವಿಯ ನೀರನ್ನು ಕುಡಿಯದೆ ನಿನ್ನ ಮೇರೆಯನ್ನು ದಾಟುವ ವರೆಗೆ ರಾಜಮಾರ್ಗದಲ್ಲಿ ಹೋಗುತ್ತೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ದೇಶವನ್ನು ದಾಟಿ ಹೋಗುವದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ ದ್ರಾಕ್ಷೇತೋಟಗಳಲ್ಲಿಯಾಗಲಿ ಹೋಗುವದಿಲ್ಲ; ಬಾವಿಗಳ ನೀರನ್ನು ಕುಡಿಯುವದಿಲ್ಲ; ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು ಎಂದು ಹೇಳಿಸಿದರು.
Kannada Bible (KNCL) BSI 2016
“ನಿಮ್ಮ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು, ನಾವು ಹೊಲಗದ್ದೆಗಳ ಮೇಲಾಗಲಿ, ದ್ರಾಕ್ಷಿತೋಟಗಳ ಮೂಲಕವಾಗಲಿ ಹಾದುಹೋಗುವುದಿಲ್ಲ; ನಿಮ್ಮ ನಾಡನ್ನು ದಾಟುವವರೆಗೂ ರಾಜಮಾರ್ಗದಲ್ಲೇ ನಡೆದುಹೋಗುತ್ತೇವೆ,” ಎಂದು ಹೇಳಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾವು ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಯಾವುದೇ ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ, ಬಾವಿಯ ನೀರನ್ನು ಕುಡಿಯದೆ, ನಿನ್ನ ದೇಶವನ್ನು ದಾಟುವವರೆಗೆ ರಾಜಮಾರ್ಗದಲ್ಲಿಯೇ ಹೋಗುತ್ತೇವೆ,” ಎಂದು ಬೇಡಿಕೊಂಡರು.