Numbers 27:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋಶುವನು ತೀರ್ಮಾನವೇನಾದರೂ ಮಾಡಬೇಕಾದರೆ ಅವನು ಯಾಜಕನಾದ ಎಲ್ಲಾಜಾರನ ಬಳಿಗೆ ಹೋಗಲಿ, ಎಲ್ಲಾಜಾರನು ಊರೀಮಿನಿಂದ ಯೆಹೋವನ ಉತ್ತರವನ್ನು ಪಡೆಯುವನು. ಆಗ ಯೆಹೋಶುವನೂ ಇಸ್ರೇಲರೆಲ್ಲರೂ ದೇವರು ಹೇಳುವ ಕಾರ್ಯಗಳನ್ನು ಮಾಡುವರು. ಆತನು, ‘ಯುದ್ಧಕ್ಕೆ ಹೋಗಿರಿ’ ಎಂದು ಹೇಳಿದರೆ ಅವರು ಯುದ್ಧಕ್ಕೆ ಹೋಗುವರು. ಆತನು, ‘ಮನೆಗೆ ಹೋಗಿರಿ’ ಎಂದು ಹೇಳಿದರೆ ಅವರು ಮನೆಗೆ ಹೋಗುವರು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನ ಚಿತ್ತವನ್ನು ತಿಳಿದುಕೊಳ್ಳುವುದಕ್ಕೆ ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನೂ ಮತ್ತು ಇಸ್ರಾಯೇಲರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಬೇಕು, ಹಿಂತಿರುಗಬೇಕು, ಅವನ ಮಾತಿನಂತೆ ನಡೆಯಬೇಕು.” ಎಂದು ಆಜ್ಞಾಪಿಸಿದನು.
Kannada BSI Bible 2016
ಅವನು ಯಾಜಕನಾದ ಎಲ್ಲಾಜಾರನ ಮುಂದೆ ನಿಲ್ಲಬೇಕು; ಇವನು ಕರ್ತನ ಮುಂದೆ ಊರೀಮಿನ ನ್ಯಾಯದ ಪ್ರಕಾರ ಅವನಿಗೋಸ್ಕರ ಆಲೋಚನೆಯ ಸಭೆಯನ್ನು ಕೇಳಬೇಕು; ಅವನ ಆಜ್ಞೆಯ ಪ್ರಕಾರವೇ ಅವನೂ ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲ್ ಮಕ್ಕಳೂ ಸಮಸ್ತ ಸಭೆಯೂ ಹೋಗುತ್ತಾ ಬರುತ್ತಾ ಇರಬೇಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
[ಯೆಹೋವನ ಚಿತ್ತವನ್ನು ತಿಳುಕೊಳ್ಳುವದಕ್ಕೆ] ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮ್ ಎಂಬ ವಸ್ತುವಿನ ಮೂಲಕ ಅವನಿಗೋಸ್ಕರ ವಿಚಾರಣೆಮಾಡುವನು. ಯೆಹೋಶುವನೂ ಇಸ್ರಾಯೇಲ್ಯರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಲೂಬೇಕು ಬರಲೂಬೇಕು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.