Psalms 30:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ದೇವರೇ, ನಾನು ಸತ್ತು ಸಮಾಧಿಯೊಳಗೆ ಹೋದರೆ, ಅದರಿಂದ ಒಳ್ಳೆಯದೇನಾದೀತು? ಸತ್ತವರು ಕೇವಲ ಮಣ್ಣಿನಲ್ಲಿ ಬಿದ್ದಿರುವರು! ಅವರು ನಿನ್ನನ್ನು ಸ್ತುತಿಸುವುದಿಲ್ಲ! ಶಾಶ್ವತವಾದ ನಿನ್ನ ನಂಬಿಗಸ್ತಿಕೆಯ ಕುರಿತು ಅವರು ಹೇಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವುದೋ? ಅದು ನಿನ್ನ ನಂಬಿಕೆಯನ್ನು ಹೊಗಳುವುದೇನು?
Kannada BSI Bible 2016
ನಾನು ಕುಣಿಯಲ್ಲಿಳಿ ದರೆ ನನ್ನ ರಕ್ತದಲ್ಲಿ ಲಾಭವೇನು? ಧೂಳು ನಿನ್ನನ್ನು ಕೊಂಡಾಡುವದೋ? ಅದು ನಿನ್ನ ಸತ್ಯವನ್ನು ತಿಳಿಸು ವದೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ಕೊಂದುಹಾಕಿ ಸಮಾಧಿಗೆ ಸೇರಿಸಿದರೆ ನಿನಗೆ ಲಾಭವೇನು? ಮಣ್ಣು ನಿನ್ನನ್ನು ಸ್ತುತಿಸುವದೋ? ಅದು ನಿನ್ನ ನಂಬಿಕೆಯನ್ನು ಹೊಗಳುವದೇನು?
Kannada Bible (KNCL) BSI 2016
“ನನ್ನ ಪ್ರಾಣ ನಷ್ಟದಿಂದ ನಿನಗೇನು ಫಲ? I ಸಮಾಧಿಗೆ ನಾನಿಳಿದರೆ ನಿನಗೇನು ಲಾಭ?” II “ಸತ್ತವರ ಬೂದಿ ನಿನ್ನ ಸ್ತುತಿಸಬಲ್ಲುದೆ? I ನಿನ್ನ ಸತ್ಯತೆಯನ್ನದು ಸಾರಲು ಬಲ್ಲುದೆ?” II
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಸಮಾಧಿಯಲ್ಲಿ ಇಳಿದು ಹೋಗಿ ನಾಶವಾದರೆ, ಅದರಿಂದ ನಿಮಗೆ ಆಗುವ ಲಾಭವೇನು? ಧೂಳು ನಿಮ್ಮನ್ನು ಸ್ತುತಿಸುವುದೋ? ಅದು ನಿಮ್ಮ ನಂಬಿಗಸ್ತಿಕೆಯನ್ನು ಪ್ರಕಟಿಸುವುದೋ?