Revelation 14:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ದೇವರಿಗೆ ಭಯಪಡಿರಿ. ಆತನನ್ನು ಸ್ತುತಿಸಿರಿ. ಜನರಿಗೆಲ್ಲ ದೇವರು ತೀರ್ಪು ನೀಡುವ ಸಮಯವು ಹತ್ತಿರ ಬಂದಿದೆ. ದೇವರನ್ನು ಆರಾಧಿಸಿರಿ. ಪರಲೋಕವನ್ನೂ ಭೂಮಿಯನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಸೃಷ್ಟಿಸಿದವನು ಆತನೇ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.
Kannada BSI Bible 2016
ಅವನು--ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ; ಯಾಕಂದರೆ ಆತನು ನ್ಯಾಯತೀರ್ಪು ಮಾಡುವ ಗಳಿಗೆ ಬಂದದೆ; ಪರಲೋಕವನ್ನೂ ಭೂ ಲೋಕವನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟು ಮಾಡಿದಾತನನ್ನೇ ಆರಾಧಿಸಿರಿ ಎಂದು ಮಹಾ ಶಬ್ದದಿಂದ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ನೀವೆಲ್ಲರು ದೇವರಿಗೆ ಭಯಪಟ್ಟು ಆತನನ್ನು ಘನಪಡಿಸಿರಿ, ಆತನು ನ್ಯಾಯತೀರ್ಪುಮಾಡುವ ಗಳಿಗೆಯು ಬಂದಿದೆ. ಭೂಲೋಕ ಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನಿಗೆ ನಮಸ್ಕಾರ ಮಾಡಿರಿ ಎಂದು ಮಹಾಶಬ್ದದಿಂದ ಹೇಳಿದನು.
Kannada Bible (KNCL) BSI 2016
ಆತನು ಮಹಾಶಬ್ದದಿಂದ, “ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ; ಅವರಿಗೆ ಸ್ತುತಿಸ್ತೋತ್ರ ಸಲ್ಲಿಸಿರಿ. ಏಕೆಂದರೆ, ಅವರು ತೀರ್ಪುಕೊಡುವ ಗಳಿಗೆಯು ಬಂದಿದೆ. ಆದ್ದರಿಂದ ಭೂಸ್ವರ್ಗಗಳನ್ನೂ ಕಡಲುಕಾರಂಜಿಗಳನ್ನೂ ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸಿರಿ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ನೀವು ದೇವರಿಗೆ ಭಯಪಟ್ಟು ಅವರಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಅವರು ನ್ಯಾಯತೀರ್ಪು ಮಾಡುವ ಸಮಯ ಬಂದಿದೆ. ಭೂಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದ ದೇವರನ್ನೇ ಆರಾಧಿಸಿರಿ!” ಎಂದು ಮಹಾಧ್ವನಿಯಿಂದ ಹೇಳಿದನು.