Romans 11:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ದೇವರು ದಯೆ ಉಳ್ಳವನಾಗಿದ್ದರೂ ಬಹುಕಠಿಣನೂ ಆಗಿದ್ದಾನೆ ಎಂಬುದನ್ನು ಗಮನಿಸು. ದೇವರು ತನ್ನನ್ನು ಹಿಂಬಾಲಿಸದಿರುವ ಜನರನ್ನು ದಂಡಿಸುತ್ತಾನೆ. ಆದರೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡಿದ್ದರೆ, ದೇವರು ನಿನಗೆ ದಯಾಳುವಾಗಿರುತ್ತಾನೆ. ಇಲ್ಲವಾದರೆ, ನಿನ್ನನ್ನು ಮರದಿಂದ ಕಡಿದುಹಾಕಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
Kannada BSI Bible 2016
ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನಿನ್ನ ಕಡೆಗೆ ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆ; ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
Kannada Bible (KNCL) BSI 2016
ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.