Romans 15:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ತಮಗೆ ತೋರುವ ಕರುಣೆಗಾಗಿ ಯೆಹೂದ್ಯರಲ್ಲದವರು ಆತನನ್ನು ಮಹಿಮೆಪಡಿಸಲೆಂದು ಕ್ರಿಸ್ತನು ಯೆಹೂದ್ಯರ ಸೇವಕನಾದನು. ಪವಿತ್ರ ಗ್ರಂಥದಲ್ಲಿ ಈ ರೀತಿ ಬರೆಯಲ್ಪಟ್ಟಿದೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನ್ಯಜನರು ದೇವರನ್ನು ಆತನ ದಯೆಯ ನಿಮಿತ್ತ ಕೊಂಡಾಡುವುದಕ್ಕಾಗಿಯೂ ಇದನ್ನು ಹೇಳುತ್ತಿದ್ದೇನೆ. ಇದಕ್ಕೆ ಸರಿಯಾಗಿ ಧರ್ಮಶಾಸ್ತ್ರದಲ್ಲಿಯೂ ಈ ರೀತಿಯಾಗಿ ಬರೆದಿದೆ, “ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು” ಎಂದೂ,
Kannada BSI Bible 2016
ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಾಂಗಗಳಾದರೆ ಕಾರುಣ್ಯದ ನಿವಿುತ್ತ ದೇವರನ್ನು ಕೊಂಡಾಡುತ್ತಾರೆಂಬದೇ. ಇದಕ್ಕೆ ಸರಿಯಾಗಿ ಶಾಸ್ತ್ರದಲ್ಲಿಯೂ ಬರೆದದೆ. ಹೇಗಂದರೆ - ಈ ಕಾರಣದಿಂದ ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದೂ
Kannada Bible (KNCL) BSI 2016
ಮತ್ತು ದೇವರು ತೋರಿದ ಕರುಣೆಗಾಗಿ ಅವರನ್ನು ಯೆಹೂದ್ಯರಲ್ಲದವರು ಸಹ ಸ್ತುತಿಸಲು ಸಾಧ್ಯವಾಗುವಂತೆ ಕ್ರಿಸ್ತಯೇಸು ಯೆಹೂದ್ಯರಿಗೆ ಅಧೀನರಾದರು. ಇದಕ್ಕೆ ಸಾದೃಶ್ಯವಾಗಿ ಪವಿತ್ರಗ್ರಂಥದಲ್ಲಿ ಹೀಗೆಂದು ಹೇಳಲಾಗಿದೆ: “ಈ ಕಾರಣದಿಂದ ನಾನು ಯೆಹೂದ್ಯರಲ್ಲದವರ ನಡುವೆ ನಿಮ್ಮನ್ನು ಕೊಂಡಾಡುವೆನು ನಿಮ್ಮ ನಾಮವನು ಸಂಕೀರ್ತಿಸುವೆನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು: “ಆದ್ದರಿಂದ ಯೆಹೂದ್ಯರಲ್ಲದವರ ನಡುವೆ ನಾನು ನಿನ್ನನ್ನು ಸ್ತುತಿಸುವೆನು, ನಾನು ನಿನ್ನ ನಾಮವನ್ನು ಸ್ತುತಿಸಿ ಹಾಡುವೆನು.”